
ಬೆಂಗಳೂರು [ಜು.22]: ವಿಪ್ ವಿಚಾರದಲ್ಲಿ ನಮ್ಮ ಹಕ್ಕುಗಳಿಗೆ ಚ್ಯುತಿ ಬಂದಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋಟ್ಗೆ ಸಲ್ಲಿಸಿರುವ ಅರ್ಜಿ ಮಂಗಳವಾರ ವಿಚಾರಣೆಗೆ ಬರಲಿದ್ದು, ನಾವು ಎದುರು ನೋಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸೋಮವಾರ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪ್ ಜಾರಿ ಮಾಡುವುದು ಆಯಾ ಪಕ್ಷಗಳಿಗೆ ಸಾಂವಿಧಾನಿಕವಾಗಿ ಇರುವ ಹಕ್ಕು. ಆದರೆ, ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ಆ ಬಗ್ಗೆ ಸ್ಪಷ್ಟತೆ ಇಲ್ಲದೆ ಇರುವುದರಿಂದ ನಮ್ಮ ಹಕ್ಕಿಗೆ ಚ್ಯುತಿ ಬಂದಿದೆ.
ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು ಮಂಗಳವಾರ ವಿಚಾರಣೆಗೆ ಬರಲಿದೆ. ನಾವು ಎದುರು ನೋಡುತ್ತಿದ್ದೇವೆ. ಈ ಅರ್ಜಿ ಇತ್ಯರ್ಥವಾಗದ ಹೊರತು ವಿಶ್ವಾಸಮತ ಯಾಚನೆ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ನಮಗೆ ಸಂವಿಧಾನದ ಮೇಲೆ ನಂಬಿಕೆಯಿದೆ. ಸಂವಿಧಾನ ಬದ್ಧವಾಗಿ ಕಾಂಗ್ರೆಸ್ಗೆ ಬೆಂಬಲ ನೀಡಿದ್ದಾರೆ. ಯಾರಿಗೆ ಜನ ಬೆಂಬಲ ಇದೆ ನಮಗೆ ಗೊತ್ತು. ವಿಶ್ವಾಸಮತ ಮಂಡನೆ ನಿರ್ಣಯ ಕುರಿತು ಸ್ಪೀಕರ್ ಅವರೇ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.