
ನವದೆಹಲಿ (ಡಿ.24): ಏಮ್ಸ್ ಡಾಕ್ಟರ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ತಮ್ಮ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವಂತೆ ಹೇಳಿದೆ. ಯಾವ ಪ್ರಮಾಣದಲ್ಲಿ ವೈದ್ಯರಿಗೆ ಒತ್ತಡ ಇರುತ್ತದೆ ಎನ್ನುವುದನ್ನು ತಿಳಿದುಕೊಳ್ಳಲು ಈ ಪತ್ರದಲ್ಲಿ ತಿಳಿಸಿದ್ದಾರೆ.
ಬಡ್ತಿ ಹಾಗೂ ಹೆಚ್ಚಿನ ವೇತನಕ್ಕಾಗಿ ಪ್ರತಿಭಟನೆ ನಡೆಸಿದ್ದ ರಾಜಸ್ಥಾನದ ವೈದ್ಯರ ಸಹಕಾರದೊಂದಿಗೆ ಈ ಪತ್ರವನ್ನು ಬರೆದಿದ್ದಾರೆ.
ನಾವು ನಿಮ್ಮ ರೀತಿಯ ಆಕ್ಟಿವ್ ಪ್ರಧಾನಿ ಹೊಂದಿರುವುದು ನಮ್ಮ ಅದೃಷ್ಟವಾಗಿದೆ. ನೀವು ಬಿಳಿ ಏಪ್ರಾನ್ ಹಾಕಿಕೊಂಡು ಒಂದು ದಿನ ನಮ್ಮೊಂದಿಗೆ ಕಳೆಯಿರಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇಲ್ಲಿರುವ ಕಳಪೆ ಸೌಕರ್ಯಗಳನ್ನೇ ಬಳಸಿಕೊಂಡು ಹೇಗೆ ಕೆಲಸ ನಿರ್ವಹಿಸಬೇಕು ಹಾಗೂ ಕೆಲವುಯ ರೋಗಿಗಳು ನಡೆದುಕೊಳ್ಳುವ ರೀತಿಯನ್ನೂ ಕೂಡ ನಾವು ಸಹಿಸಿಕೊಳ್ಳಬೇಕು ಎನ್ನುವುದು ಆಗ ತಿಳಿಯುತ್ತದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.