
ಬೆಂಗಳೂರು(ಸೆ.27): ವಿಶಿಷ್ಟ ಬರವಣಿಗೆಯ ಮೂಲಕ ತಮ್ಮದೆ ಓದುಗ ಅಭಿಮಾನಿಗಳನ್ನು ಹೊಂದಿದ ಪತ್ರಕರ್ತ ರವಿಬೆಳಗೆರೆ ತಮ್ಮ ವಾರಪತ್ರಿಕೆ ಹಾಯ್ ಬೆಂಗಳೂರನ್ನು ಮುಚ್ಚುವ ನಿರ್ಧಾರ ಕೈಗೊಂಡಿದ್ದಾರೆ.
ಕಳೆದ 22 ವರ್ಷಗಳಿಂದ ಪ್ರತಿವಾರ ಓದುಗರ ಕೈ ಸೇರುತ್ತಿದ್ದ ಹಾಯ್ ಬೆಂಗಳೂರು ಇನ್ನು ಕೆಲವು ದಿನಗಳಲ್ಲಿ ನೆನಪಾಗಿ ಮಾತ್ರ ಉಳಿಯಲಿದೆ. 'ಒನ್ ಇಂಡಿಯಾ' ವೆಬ್'ಸೈಟ್'ಗೆ ನೀಡಿದ ಸಂದರ್ಶನದಲ್ಲಿ ಈ ಮಾಹಿತಿ ತಿಳಿಸಿದ್ದಾರೆ.
ಪತ್ರಿಕೆ ಮುಚ್ಚುವುದಕ್ಕೆ ವಯಸ್ಸು, ಕುಟುಂಬಸ್ಥರೊಂದಿಗೆ ಕಾಲ ಕಳೆಯುವಿಕೆ ಹಾಗೂ ಮನಮುಟ್ಟುವ ಬರವಣೆಗೆಯ ಕಾರಣಗಳನ್ನು ನೀಡಿದ್ದು, 'ಓ ಮನಸೆ' ಮೂಲಕ ತಮ್ಮ ಬರವಣಿಗೆಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.