
ನವದೆಹಲಿ(ಡಿ.07): ಬಿಜೆಪಿ ಟಿಕೆಟ್ನಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಹೇಶ್ ಶರ್ಮಾ ಎಂಬವರನ್ನು ಮಂಗಳವಾರ ಪೊಲೀಸರು ಬಂಸಿದ್ದು, ಅವರಲ್ಲಿದ್ದ 2 ಸಾವಿರ ಮುಖಬೆಲೆಯ ಹೊಸ ನೋಟುಗಳನ್ನು ಒಳಗೊಂಡ ಲಕ್ಷಾಂತರ ಮೊತ್ತವನ್ನು ವಶಪಡಿಸಿಕೊಂಡಿದ್ದಾರೆ. ಜತೆಗೆ, ಕಲ್ಲಿದ್ದಲು ಮಾಫಿಯಾಗೆ ಸಂಬಂಧಿಸಿದ ಹಲವು ಮಂದಿ ಶಂಕಿತರನ್ನೂ ವಶಕ್ಕೆ ಪಡೆಯಲಾಗಿದೆ.
ರಾಣಿಗಂಜ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಹೇಶ್ ಶರ್ಮಾ ಕೇವಲ ಶೇ.18ರಷ್ಟು ಮತಗಳನ್ನು ಪಡೆದು ಸೋಲುಂಡಿದ್ದರು. ಈಗಲೂ ಅವರು ಬಿಜೆಪಿ ಸದಸ್ಯನೇ ಎಂಬುದು ಖಚಿತವಾಗಿಲ್ಲ. ಆದರೆ, ಹಣದ ಅವ್ಯವಹಾರ ಆರೋಪದಲ್ಲಿ ಅವರನ್ನು ಬಂಸಲಾಗಿದ್ದು, ಈ ವೇಳೆ ಲಕ್ಷಾಂತರ ರು.ಗಳು ಸಿಕ್ಕಿವೆ ಎಂದಿದ್ದಾರೆ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.