
ಕೋಲ್ಕತ್ತಾ[ಜೂ. 11] ನಿಜಕ್ಕೂ ಈ ಘಟನೆ ಮಾತ್ರ ಎಲ್ಲರನ್ನು ಬೆಚ್ಚಿಬೀಳಿಸಿದೆ. ಬಿಜೆಪಿ ಕಾರ್ಯಕರ್ತ ಸಮ್ ತುಲ್ ದೋಲಿ ಅವರ ಶವ ಸಾರ್ ಪೋತಾ ಹಳ್ಳಿಯ ಬಳಿಯ ಮರದಲ್ಲಿ ನೇತಾಡುತ್ತಿರುವುದು ಪತ್ತೆಯಾಗಿದೆ. ಬಿಜೆಪಿ ಮತ್ತು ಟಿಎಂಸಿ ನಡುವೆ ಜೈ ಶ್ರೀರಾಮ್ ಘೋಷಣೆ ನಂತರ ಪರಿಸ್ಥಿತಿ ಬಿಗಡಾಯಿಸಿದೆ.
ದುಷ್ಕರ್ಮಿಗಳಿಂದ ಹತ್ಯೆಯಾದ ಕಾರ್ಯಕರ್ತನ ದೇಹವನ್ನು ಪೋಸ್ಟ್ ಮಾರ್ಟ್ಂ ಗೆ ಕಳಿಸಲು ಪೊಲೀಸರು ಮುಂದಾದಾಗ ಪ್ರತಿಭಟನೆ ಎದುರಿಸಬೇಕಾಗಿ ಬಂದಿತು.
ಬಂಗಾಳದಲ್ಲಿ ‘ಜೈ ಮಹಾ ಕಾಳಿ, ಜೈ ಶ್ರೀರಾಮ್’ ಬಿಜೆಪಿ ಸ್ಲೋಗನ್!
ಪಶ್ಚಿಮ ಬಂಗಾಳದಲ್ಲಿನ ವಾಸ್ತವಿಕ ಸ್ಥತಿ ವರದಿ ಮಾಡಲು ಕೇಂದ್ರ ಸರಕಾರ ತಿಳಿಸಿದ್ದರು ತೃಣಮೂಲ ಕಾಂಗ್ರೆಸ್ ನೇತೃತ್ವದ ಮಮತಾ ಬ್ಯಾನರ್ಜಿ ಸರಕಾರ ಮಾತ್ರ ವರದಿ ನೀಡುವ ಗೋಜಿಗೆ ಹೋಗಿಲ್ಲ. ಬಿಜೆಪಿ ಮತ್ತು ಟಿಎಂಸಿ ಪರಸ್ಪರ ಆರೋಪ -ಪ್ರತ್ಯಾರೋಪದಲ್ಲೇ ಕಾಲ ಕಳೆಯುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.