‘2019ರ ತೀರ್ಪು HISTORY ಅಲ್ಲಾ ಅದೊಂದು MYSTERY’!

Published : Jul 21, 2019, 03:08 PM ISTUpdated : Jul 21, 2019, 03:09 PM IST
‘2019ರ ತೀರ್ಪು HISTORY ಅಲ್ಲಾ ಅದೊಂದು MYSTERY’!

ಸಾರಾಂಶ

ಪ.ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ಟಿಎಂಸಿ ಮೆಗಾ ರ‍್ಯಾಲಿ| ಮೆಗಾ ರ‍್ಯಾಲಿಯಲ್ಲಿ ಪ.ಬಂಗಾಳ ಸಿಎಂ ಮಮತಾ ಸಿಡಿಲಿನ ಭಾಷಣ| 2019ರ ಲೋಕಸಭೆ ಚುನಾವಣೆ ರಹಸ್ಯಮಯ ಎಂದ ಮಮತ ಬ್ಯಾನರ್ಜಿ| ‘ಇವಿಎಂ ಯಂತ್ರದ ಸಹಾಯದಿಂದ ಅಧಿಕ ಸೀಟು ಪಡೆದ ಬಿಜೆಪಿ’| ವಿಧಾನಸಭೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲು ಮಮತ ಸಲಹೆ| 15 ಲಕ್ಷ ರೂ. ಎಲ್ಲಿ ಮೋದಿ ಜೀ ಎಂದು ಕೇಳಿದ ಮಮತಾ|

ಕೋಲ್ಕತ್ತಾ(ಜು.21): 2019ರ ಲೋಕಸಭೆ ಚುನಾವಣೆಯ ಫಲಿತಾಂಶದ ಮೇಲೆ ಅನುಮಾನ ವ್ಯಕ್ತಪಡಿಸಿರುವ ಪ.ಬಂಗಾಳ ಸಿಎಂ , ಟಿಎಂಸಿ ಮುಖ್ಯಸ್ಥೆ ಮಮತ ಬ್ಯಾನರ್ಜಿ, ಫಲಿತಾಂಶವನ್ನು ಐತಿಹಾಸಿಕವಲ್ಲ ಬದಲಿಗೆ ರಹಸ್ಯಮಯ ಎಂದು ಬಣ್ಣಿಸಿದ್ದಾರೆ.

ಕೋಲ್ಕತ್ತಾದಲ್ಲಿ ಟಿಎಂಸಿ ಹಮ್ಮಿಕೊಂಡಿರುವ ಮೆಗಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಮಮತಾ, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಗಳಿಸಿರುವ ಸೀಟುಗಳು ಅನ್ಯಾಯದಿಂದ ಪಡೆದವು ಎಂದು ಹೇಳಿದ್ದಾರೆ.

ಹಣ, ಪೊಲೀಸ್ ವ್ಯವಸ್ಥೆ ದರ್ಬಳಕೆ ಹಾಗೂ ಇವಿಎಂ ಸಹಾಯದಿಂದ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಿದರೆ ಬಿಜೆಪಿ ಅಸಲಿ ಬಂಡವಾಳ ಬಯಲಾಗುತ್ತದೆ ಎಂದು ಮಮತಾ ಕಿಡಿಕಾರಿದ್ದಾರೆ. 

ಟಿಎಂಸಿ ಮೆಗಾ ರ‍್ಯಾಲಿಗೆ ಬಿಜೆಪಿಗರು ಅಡ್ಡಿಪಡಿಸುತ್ತಿದ್ದು, ನಮ್ಮ ಕಾರ್ಯಕರ್ತರು ತಿರುಗಿ ಬಿದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದು ಇದೇ ವೇಳೆ ಮಮತಾ ಬ್ಯಾನರ್ಜಿ ಎಚ್ಚರಿಸಿದರು.

ಇದೇ ವೇಳೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಮಮತಾ, ಪ್ರತಿಯೊಬ್ಬರಿಗು 15 ಲಕ್ಷ ರೂ. ನೀಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಮೋದಿ ಮೊದಲು ತಾವು ನೀಡಿದ್ದ ಭರವಸೆ ಈಡೇರಿಸಲಿ ಎಂದು ಹರಿಹಾಯ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು