ಸಂಸದರು ವೈದ್ಯರ ಮೇಲೆ ಹಲ್ಲೆ ಮಾಡಿದ್ದು ತಪ್ಪು: ಯಡಿಯೂರಪ್ಪ

Published : Jan 15, 2017, 12:17 PM ISTUpdated : Apr 11, 2018, 12:51 PM IST
ಸಂಸದರು ವೈದ್ಯರ ಮೇಲೆ ಹಲ್ಲೆ ಮಾಡಿದ್ದು ತಪ್ಪು: ಯಡಿಯೂರಪ್ಪ

ಸಾರಾಂಶ

ಸಂಸದ ಅನಂತಕುಮಾರ ಹೆಗಡೆಯವರಿಗೆ ಅವರ ತಪ್ಪಿನ ಅರಿವಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕಾರವಾರ (ಜ.15): ಕರ್ತವ್ಯನಿರತ ವೈದ್ಯರ ಮೇಲೆ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹಲ್ಲೆ ನಡೆಸಿರುವ ಘಟನೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಇಂದು ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅನಂತಕುಮಾರ ಹೆಗಡೆ ವೈದ್ಯರ ಮೇಲೆ ಕೈ ಮಾಡಿದ್ದು ತಪ್ಪು, ಅವರು ದುಡುಕಬಾರದಿತ್ತು ಎಂದಿದ್ದಾರೆ.

ಸಂಸದ ಅನಂತಕುಮಾರ ಹೆಗಡೆಯವರಿಗೆ ಅವರ ತಪ್ಪಿನ ಅರಿವಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ತನ್ನ ತಾಯಿಯ ಅನಾರೋಗ್ಯಕ್ಕೆ ವೈದ್ಯರು ಸ್ಪಂದಿಸಿಲ್ಲ ಎನ್ನುವ ಕಾರಣಕ್ಕೆ ಉತ್ತರ ಕನ್ನಡ ಸಂಸದರಾಗಿರುವ ಅನಂತಕುಮಾರ ಹೆಗಡೆ, ಶಿರಸಿಯ ಟಿಎಸ್’ಎಸ್ ಆಸ್ಪತ್ರೆ ವೈದ್ಯರ ಮೇಲೆ ಆಸ್ಪತ್ರೆಗೆ ನುಗ್ಗಿ ಹಲ್ಲೆ ನಡೆಸಿದ್ದರು.

ಸಂಸದರು ವೈದ್ಯರ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಂಸದರ ಗೂಂಡಾಗಿರಿಗೆ ವೈದ್ಯಕೀಯ ವಲಯ ಹಾಗೂ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು: ಇದು 'ನುಂಗಪ್ಪ' ಸಾಹುಕಾರ್‌ ಸ್ಟೋರಿ
3700 ಸರ್ಕಾರಿ ಶಾಲೆ, ಕಾಲೇಜಲ್ಲಿ ಸದ್ಯದಲ್ಲೇ ಸ್ಮಾರ್ಟ್‌ ಕ್ಲಾಸ್‌ ಶುರು, ಖಾಸಗಿ ಶಾಲೆಗಳ ಮಾದರಿ ಡಿಜಿಟಲ್‌ ಶಿಕ್ಷಣಕ್ಕೆ ಸರ್ಕಾರ ಸಿದ್ಧತೆ