
ನವದೆಹಲಿ (ಮಾ.21): ಪಂಜಾಬ್ ಸಚಿವ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾದ ಬಳಿಕ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಖ್ಯಾತ ಟಿವಿ ಶೋ ಒಂದರಲ್ಲಿ ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ. ಇದನ್ನು ನಾನು ಲಾಭದ ಉದ್ದೇಶಕ್ಕಾಗಿ ಮಾಡುತ್ತಿಲ್ಲವೆಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕಚೇರಿ ಕೆಲಸ ಮಾಡುತ್ತೇನೆ. ಸಂಜೆ 6 ರ ನಂತರ ಟಿವಿ ಶೋನಲ್ಲಿ ಭಾಗವಹಿಸುತ್ತೇನೆ. ಇದು ಯಾರು ಪ್ರಶ್ನಿಸುವಂತಿಲ್ಲವೆಂದು ಸಿಧು ಹೇಳಿದ್ದಾರೆ.
ಮಂತ್ರಿಯೊಬ್ಬರು ಟಿವಿ ಶೋ ನಡೆಸಿಕೊಡಬಹುದಾ ಎನ್ನುವುದರ ಬಗ್ಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅಡ್ವೋಕೇಟ್ ಜನರಲ್ ಅತುಲ್ ನಂದಾರನ್ನು ಸಂಪರ್ಕಿಸಿದ್ದಾರೆ. ಕಡತಗಳು ನನ್ನ ಕೈಸೇರಿದ ಬಳಿಕ ನಾನು ಉತ್ತರಿಸುತ್ತೇನೆ ಎಂದು ನಂದಾ ಹೇಳಿದ್ದಾರೆ.
ಈ ವಿಚಾರದ ಬಗ್ಗೆ ಸಿಧು ಪತ್ನಿ ನವಜೋತ್ ಕೌರ್ ಸಿಧು ಪತಿಗೆ ಬೆಂಬಲಿಸುತ್ತಾ, ಶತ್ರುಘ್ನ ಸಿನ್ಹಾ ಸಂಸದರಾಗಿಯೂ ಕೂಡಾ ಚಿತ್ರಗಳನ್ನು ಮಾಡಿದ್ದಾರೆ. ಅದೇ ರೀತಿ ಕಿರಣ್ ಖೇರ್ ಕೂಡಾ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಒಂದು ವೇಳೆ ಕಾನೂನಿನ ಆಕ್ಷೇಪ ವ್ಯಕ್ತವಾದರೆ ಸಿಧು ಟಿವಿ ಶೋವನ್ನು ಕೈಬಿಡುತ್ತಾರೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.