
ನವದೆಹಲಿ: ಶುಕ್ರವಾರ ಅವಿಶ್ವಾಸ ಗೊತ್ತುವಳಿ ಪರ ಮಾತನಾಡುವ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಾವೆಲ್ಲಾ ಈ ಸರ್ಕಾರದ ಜುಮ್ಲಾ ದಾಳಿಯ ಬಲಿಪಶುಗಳು ಎಂದು ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಅವರು ಇಂಥದ್ದೊಂದು ವಾಗ್ದಾಳಿ ನಡೆಸುತ್ತಲೇ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯ ಗಳ ನೆಟ್ಟಿಗರು, ಜುಮ್ಲಾ ಪದ ಅರ್ಥಕ್ಕಾಗಿ ಗೂಗಲ್ನಲ್ಲಿ ಭಾರೀ ಹುಡುಕಾಟ ನಡೆಸತೊಡಗಿದ್ದರು.
ರಾಹುಲ್ ಈ ಪದ ಬಳಸಿದ ಕೆಲ ಹೊತ್ತಿನ ಬಳಿಕ ದಕ್ಷಿಣದ ರಾಜ್ಯಗಳಲ್ಲಿ ಇಂಟರ್ನೆಟ್ಲ್ಲಿ ಅತಿಹೆಚ್ಚು ಹುಡುಕಾಡಿದ ಪದವಾಗಿ ಜುಮ್ಲಾ ಹೊರಹೊಮ್ಮಿತ್ತು. ಅದರಲ್ಲೂ ಕರ್ನಾಟಕ ಇಂಥ ಹುಡುಕಾಟದಲ್ಲಿ ನಂ.1 ಸ್ಥಾನದಲ್ಲಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಚರ್ಚೆ ಆದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.