
ಬೆಂಗಳೂರು[ಜು.6] ಸರ್ಕಾರಿ ಶಾಲೆಗಳ ವಿಲೀನಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರದ ತಪ್ಪು ನಿರ್ಧಾರ ಮಾಡಿದೆ ಎಂದು ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ಹೇಳಿದ್ದಾರೆ.
ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕೇ ಹೊರತು ಮುಚ್ಚುವುದಲ್ಲ. ವಿಲೀನಕ್ಕೂ ಮುಚ್ಚುವುದಕ್ಕೂ ವ್ಯತ್ಯಾಸ ಇಲ್ಲ. ಹೀಗೆ ಮಾಡಿದರೆ ಖಾಸಗಿ ಶಾಲೆಗಳಿಗೆ ಪರೋಕ್ಷ ಬೆಂಬಲ ನೀಡಿದಂತಾಗುತ್ತದೆ ಎಂದು ಹೇಳಿದ್ದಾರೆ.
ಈಗಾಗಲೇ ಖಾಸಗಿಯವರಿಗೆ ಹಣ ಕೊಟ್ಟು ಸರ್ಕಾರ ಬೆಳೆಸಿದೆ ಆರ್ ಟಿಇ ಕಾಯ್ದೆ ರದ್ದಾಗಬೇಕು ಅದರಿಂದ ಬಡ ವಿದ್ಯಾರ್ಥಿಗಳಿಗೆ ಯಾವುದೇ ಲಾಭ ಆಗುತ್ತಿಲ್ಲ. ಖಾಸಗಿ ಶಾಲೆಗಳು ಆರ್ ಟಿಇ ಮಕ್ಕಳನ್ನು ಕೀಳಾಗಿ ನಡೆಸಿಕೊಳ್ಳುತ್ತಾ ಇದೆ. ಈ ಬಗ್ಗೆ ಅನೇಕ ದೂರುಗಳು ಬಂದಿರುವುದು ಗೊತ್ತಿರುವ ವಿಚಾರ ಎಂದು ಹೇಳಿದರು.
ಆರ್ ಟಿಇ ಹೆಸರಿನಲ್ಲಿ 22 ಕೋಟಿ ರು. ಗೂ ಅಧಿಕ ಹಣವನ್ನು ಖಾಸಗಿ ಶಾಲೆಗಳಿಗೆ ಕೊಡುವ ಬದಲು ಅದೇ ಹಣದಲ್ಲಿ ಸರ್ಕಾರಿ ಶಾಲೆಗಳನ್ನೇ ಅಭಿವೃದ್ಧಿ ಪಡಿಸಿದರೆ ಶಿಕ್ಷಣ ವ್ಯವಸ್ಥೆ ಸುಧಾರಣೆಯಾಗುತ್ತದೆ. ಆರ್ ಟಿಇ ರದ್ದು ಪಡಿಸಲು ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಭಾಷೆ ಜಾರಿಗೆ ತರುವ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.