
ನವದೆಹಲಿ [ಸೆ.04]: ಎರಡು ವರ್ಷಗಳ ಹಿಂದೆ ದೆಹಲಿಯ ಫ್ಲ್ಯಾಟ್ಗಳಲ್ಲಿ ಸಿಕ್ಕ 8.5 ಕೋಟಿ ರು. ನಗದಿನ ವಿಚಾರವಾಗಿ ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ನಾಲ್ಕು ದಿನಗಳ ಸುದೀರ್ಘ ವಿಚಾರಣೆ ಬಳಿಕ ಮಂಗಳವಾರ ರಾತ್ರಿ ಬಂಧಿಸಿದೆ.
ಫ್ಲ್ಯಾಟ್ನಲ್ಲಿ ಸಿಕ್ಕ ಹಣದ ಮೂಲದ ಕುರಿತು ಸಮರ್ಪಕ ಉತ್ತರ ನೀಡದಿರುವುದು ಹಾಗೂ ತನಿಖೆಗೆ ಅಸಹಕಾರ ತೋರಿದ ಆರೋಪದ ಮೇರೆಗೆ ಡಿ.ಕೆ.ಶಿವಕುಮಾರ್ರನ್ನು ಇ.ಡಿ. ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯನ್ವಯ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಡಿ.ಕೆ.ಶಿವಕುಮಾರ್ ಬಂಧನ ತರುವಾಯ ನಿಯಮಾವಳಿಯಂತೆ ಅವರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯಲಾಗಿತ್ತು.
ಡಿಕೆಶಿ ಮುಂದೇನು?
ಇ.ಡಿ. ಹಾಜರುಪಡಿಸುವ ಕೋರ್ಟ್ ಮುಂದೆ ಜಾಮೀನಿಗೆ ಅರ್ಜಿ ಹಾಕುವುದು
ಅರ್ಜಿ ತಿರಸ್ಕೃತಗೊಂಡರೆ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗುವುದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.