
ಪಾಂಡವಪುರ: ನನ್ನ ಅಜಾಗರೂಕತೆಯಿಂದಲೇ ದುರಂತ ಸಂಭವಿಸಿತು. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುತ್ತದೆ ಎಂಬ ಕಾರಣಕ್ಕೆ ಸ್ವಲ್ಪ ಎಡಕ್ಕೆ ಎಳೆದ ಪರಿಣಾಮ ಬಸ್ ನಾಲೆಗೆ ಉರುಳಿತು ಎಂದು 30 ಮಂದಿಯ ಬಲಿ ಪಡೆದ ಬಸ್ ಚಾಲಕ ಶಿವಣ್ಣ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.
ನ.24ರಂದು ತಾಲೂಕಿನ ಕನಗನಮರಡಿ ಸಮೀಪ ವಿ.ಸಿ. ನಾಲೆಗೆ ರಾಜ್ಕುಮಾರ್ ಹೆಸರಿನ ಖಾಸಗಿ ಬಸ್ ಉರುಳಿ ಮಂದಿ ಜಲ ಸಮಾಧಿಯಾಗಿದ್ದರು. ಅವಘಡ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಶಿವಣ್ಣ ಕಣ್ಮರೆಯಾಗಿದ್ದ.
15 ದಿನಗಳ ಕಾಲ ಆರೋಪಿಗಾಗಿ ಹುಡುಕಾಟ ನಡೆಸಿದ ಪೊಲೀಸರು, ಶನಿವಾರ ಬೆಂಗಳೂರಿನಲ್ಲಿ ಶಿವಣ್ಣನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿ ಯಾಗಿದ್ದರು. ಸೋಮವಾರ ಪಾಂಡವಪುರದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ವಾರದ ಹಿಂದೆಯಷ್ಟೇ ನಿರ್ವಾಹಕನನ್ನು ಬಂಧಿಸಲಾಗಿತ್ತು. ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರಿಬ್ಬರು ಪರಾರಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.