
ಭೋಪಾಲ್: ಕಳೆದ 14 ವರ್ಷಗಳಿಂದ ಅಧಿಕಾರ ವಂಚಿತವಾಗಿ ಕೈ ಕೈ ಹಿಸುಕಿಕೊಳ್ಳುತ್ತಿರುವ ಮಧ್ಯಪ್ರದೇಶದ ಕಾಂಗ್ರೆಸ್ ಘಟಕ, ಕೊನೆಗೂ ಇದಕ್ಕೆ ಕಾರಣವನ್ನು ಹುಡುಕಿ, ಅದಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಪಕ್ಷದ ನಾಯಕರಿಗೀಗ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಆತ್ಮವಿಶ್ವಾಸ ತುಂಬಿ ತುಳುಕುತ್ತಿದೆ.
ಕೆಲ ದಿನಗಳ ಹಿಂದೆ, ಪಕ್ಷದ ಕಳಪೆ ಸಾಧನೆ ಬಗ್ಗೆ ವಾಸ್ತುತಜ್ಞರನ್ನು ಕರೆಸಿ, ಕಟ್ಟಡವನ್ನು ತೋರಿಸಿದಾಗ, ಕಟ್ಟಡದ ನೆಲಮಹಡಿಯಲ್ಲಿರುವ ಪಕ್ಷದ ವಕ್ತಾರರು ಕೂರುವ ಕೊಠಡಿಯ ಪಕ್ಕದಲ್ಲೇ ಮೂರು ಶೌಚಾಲಯಗಳಿದ್ದು, ಇವು ಪಕ್ಷಕ್ಕೆ ಕಂಟಕವಾಗಿದೆ ಎಂದಿದ್ದರು. ಹೀಗಾಗಿ ಇದೀಗ ಆ ಮೂರೂ ಶೌಚಾಲಯಗಳನ್ನು ಅಲ್ಲಿಂದ ಬೇರೆಡೆಗೆ ಸ್ಥಳಾಂತರಿಸುವ ಮೂಲಕ ಪಕ್ಷಕ್ಕೆ ಅಂಟಿದ್ದ ಶಾಪ ವಿಮೋಚನೆ ಮಾಡುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.