ನಷ್ಟಕ್ಕೆ ಬೆಚ್ಚಿ ಭಾರತಕ್ಕೆ ತನ್ನ ವಾಯುಸೀಮೆ ತೆರೆದ ಪಾಕ್ ಸರ್ಕಾರ!

Published : Jul 17, 2019, 09:14 AM IST
ನಷ್ಟಕ್ಕೆ ಬೆಚ್ಚಿ ಭಾರತಕ್ಕೆ ತನ್ನ ವಾಯುಸೀಮೆ ತೆರೆದ ಪಾಕ್ ಸರ್ಕಾರ!

ಸಾರಾಂಶ

ನಷ್ಟಕ್ಕೆ ಕಂಗೆಟ್ಟು ಭಾರತಕ್ಕೆ ವಾಯು ಸೀಮೆ ತೆರವುಗೊಳಿಸಿದ ಪಾಕಿಸ್ತಾನ| ಪಾಕ್‌ ವಾಯು ಪ್ರದೇಶ ಭಾರತದ ವಿಮಾನ ಹಾರಾಟಕ್ಕೆ ಮುಕ್ತ| ನಿಷೇಧದಿಂದ 685 ಕೋಟಿ ರು. ನಷ್ಟಅನುಭವಿಸಿದ್ದ ಪಾಕಿಸ್ತಾನ

ಇಸ್ಲಾಮಾಬಾದ್‌[ಜು.17]: ಫೆ.26ರಂದು ಭಾರತ ಬಾಲಾಕೊಟ್‌ ಉಗ್ರರ ನೆಲೆಯ ಮೇಲೆ ವಾಯು ದಾಳಿ ನಡೆಸಿದ ಬಳಿಕ ತನ್ನ ವಾಯುಸೀಮೆಯನ್ನು, ಭಾರತದ ವಿಮಾನಗಳ ಸಂಚಾರಕ್ಕೆ ನಿಷೇಧಿಸಿದ್ದ ಪಾಕಿಸ್ತಾನ ದಿಢೀರನೆ ತನ್ನ ನಿಲುವು ಬದಲಿಸಿದೆ. ಮಂಗಳವಾರದಿಂದಲೇ ಜಾರಿಗೆ ಬರುವಂತೆ ಭಾರತದ ವಿಮಾನಗಳ ಹಾರಾಟಕ್ಕೆ ಅನುವು ಮಾಡಿಕೊಟ್ಟಿದೆ.

ಗಡಿಯ ಮುಂಚೂಣಿ ಸ್ಥಳಗಳಿಂದ ಭಾರತ ತನ್ನ ಯುದ್ಧ ವಿಮಾನ ಹಿಂಪಡೆಯದ ಹೊರತೂ ಭಾರತಕ್ಕೆ ವಾಯುಸೀಮೆ ಮುಕ್ತಗೊಳಿಸುವುದಿಲ್ಲ ಎಂದಿದ್ದ ಪಾಕ್‌, ಇದೀಗ ತನ್ನ ನಿಲುವು ಬದಲಿಸಲು ಸೌಹಾರ್ದತನಕ್ಕಿಂತಲೂ ಆರ್ಥಿಕ ಹೊಡೆತವೇ ಕಾರಣ ಎನ್ನಲಾಗುತ್ತಿದೆ.

ಪಾಕ್‌, ತನ್ನ ವಾಯು ಸೀಮೆಯನ್ನು ಭಾರತಕ್ಕೆ ನಿಷೇಧಿಸಿದ್ದರಿಂದ ಭಾರತದ ವಿಮಾನಯಾನ ಸಂಸ್ಥೆಗಳಿಗೆ 550 ಕೋಟಿ ರು. ನಷ್ಟಉಂಟಾದರೆ, ಪಾಕಿಸ್ತಾನ ಕೂಡ 685 ಕೋಟಿ ರು.ನಷ್ಟುನಷ್ಟಅನುಭವಿಸಿದೆ. ಅಲ್ಲದೇ ತನ್ನ ವಾಯು ಮಾರ್ಗವನ್ನು ಬಳಸಿಕೊಂಡಿದ್ದಕ್ಕೆ ವಿಧಿಸುತ್ತಿದ್ದ ಶುಲ್ಕದಿಂದಲೂ ಪಾಕಿಸ್ತಾನ ವಿಮಾನಯಾನ ಸಂಸ್ಥೆ ಸಾಕಷ್ಟುಹಣಗಳಿಸುತ್ತಿತ್ತು. ಹೀಗಾಗಿ ಪಾಕಿಸ್ತಾನ ತನ್ನ ಕಠಿಣ ನಿಲುವನ್ನು ಬದಲಿಸಿದೆ.

ಪಾಕಿಸ್ತಾನ ತನ್ನ ವಾಯು ಪ್ರದೇಶವನ್ನು ಸ್ಥಗಿತಗೊಳಿಸಿದ್ದರಿಂದ ಉತ್ತರ ಭಾರತದ ವಿಮಾನಗಳು ಗುಜರಾತ್‌ ಇಲ್ಲವೇ ಮಹಾರಾಷ್ಟ್ರದ ಮೂಲಕ ಯುರೋಪ್‌ ಹಾಗೂ ಇತರ ಪಾಶ್ಚಾತ್ಯ ದೇಶಗಳಿಗೆ ಪ್ರಯಾಣಬೆಳೆಸಬೇಕಿತ್ತು. ದೆಹಲಿ, ಅಮೃತಸರ ಹಾಗೂ ಲಖನೌ ಮೂಲಕ ಹಾರಾಟ ಕೈಗೊಳ್ಳುವ ವಿಮಾನಗಳು ಭಾರೀ ತೊಂದರೆ ಎದುರಿಸಿದ್ದವು. ಹೀಗಾಗಿ ಸುಮಾರು 70ರಿಂದ 80 ನಿಮಿಷ ಹೆಚ್ಚುವರಿ ಸಮಯ ಹಾಗೂ ಇಂಧನವನ್ನು ವ್ಯಯಿಸಬೇಕಾಗಿತ್ತು.

ಇದೀಗ ಪಾಕಿಸ್ತಾನ ವಾಯು ಮಾರ್ಗದ ಮೇಲಿನ ನಿಷೇಧವನ್ನು ತೆರವುಗೊಳಿಸಿರುವುದರಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸುವ ಏರ್‌ ಇಂಡಿಯಾ ವಿಮಾನವೊಂದಕ್ಕೆ ಒಂದು ಕಡೆಯ ಪ್ರಯಾಣಕ್ಕೆ 20 ಲಕ್ಷ ರು. ಉಳಿತಾಯವಾಗಲಿದೆ. ಅದೇ ರೀತಿ ಯುರೋಪ್‌ಗೆ ತೆರಳುವ ವಿಮಾನಕ್ಕೆ 5 ಲಕ್ಷ ರು. ಉಳಿತಾಯವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ