ಮುರ್ಡೇಶ್ವರದ ವಾಟ್ಸಪ್ ಗ್ರೂಪ್ ಅಡ್ಮಿನ್ ಸೆರೆ

Published : May 02, 2017, 01:58 AM ISTUpdated : Apr 11, 2018, 01:02 PM IST
ಮುರ್ಡೇಶ್ವರದ ವಾಟ್ಸಪ್ ಗ್ರೂಪ್ ಅಡ್ಮಿನ್ ಸೆರೆ

ಸಾರಾಂಶ

ಮುರ್ಡೇಶ್ವರದ ಬೈಲೂರು ವ್ಯಾಪ್ತಿಯ ದೊಡ್ಡಬಲ್ಸೆ ನಿವಾಸಿ ಕೃಷ್ಣ ಸಣ್ಣತಮ್ಮ ನಾಯ್ಕ(30) ಬಂಧಿತ ಆರೋಪಿ. ರಿಕ್ಷಾ ಚಾಲಕನಾಗಿದ್ದ ಈತ ‘ಡಿ ಬಲ್ಸೆ ಬಾಯ್ಸ್' ಎಂಬ ವಾಟ್ಸ್‌'ಆ್ಯಪ್‌ ಗ್ರೂಪ್‌'ನ ಅಡ್ಮಿನ್‌ ಆಗಿದ್ದ. ಈ ಗ್ರೂಪ್‌'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ತಿರುಚಿ ಅಶ್ಲೀಲಗೊಳಿಸಿ ಅವಹೇಳನ ಮಾಡಿದ್ದ ಫೋಟೋವೊಂದು ಹರಿದಾಡಿತ್ತು

ಭಟ್ಕಳ: ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಬಳಕೆದಾರರೇ ಎಚ್ಚರ. ವಾಟ್ಸಪ್‌, ಫೇಸ್‌'ಬುಕ್‌ ಗ್ರೂಪ್‌'ಗಳಲ್ಲಿ ಅವಹೇಳನಕಾರಿ ಪೋಸ್ಟ್‌'ಗಳನ್ನು ಪ್ರಕಟಿಸಿದರೆ ಗ್ರೂಪ್‌ ಅಡ್ಮಿನ್‌ ಜೈಲಿಗೆ ಹೋಗಬೇಕಾದೀತು. ಈ ರೀತಿಯ ಕಾನೂನು ಜಾರಿಗೆ ಬಂದ ಕೆಲ ದಿನಗಳಲ್ಲೇ ವಾಟ್ಸಪ್‌ ಅಡ್ಮಿನ್‌'ರನ್ನು ಜೈಲಿಗೆ ಕಳುಹಿಸಿದ ಕರ್ನಾಟಕದ ಮೊದಲ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ವಾಟ್ಸಪ್‌'ನಲ್ಲಿ ಅವಹೇಳನ ಮಾಡಿದ ಆರೋಪಕ್ಕಾಗಿ ಮುರ್ಡೇಶ್ವರ ಠಾಣೆ ಪೊಲೀಸರು ವಾಟ್ಸಪ್‌ ಗ್ರೂಪ್‌'ವೊಂದರ ಅಡ್ಮಿನ್‌'ನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. 

ಮುರ್ಡೇಶ್ವರದ ಬೈಲೂರು ವ್ಯಾಪ್ತಿಯ ದೊಡ್ಡಬಲ್ಸೆ ನಿವಾಸಿ ಕೃಷ್ಣ ಸಣ್ಣತಮ್ಮ ನಾಯ್ಕ(30) ಬಂಧಿತ ಆರೋಪಿ. ರಿಕ್ಷಾ ಚಾಲಕನಾಗಿದ್ದ ಈತ ‘ಡಿ ಬಲ್ಸೆ ಬಾಯ್ಸ್' ಎಂಬ ವಾಟ್ಸ್‌'ಆ್ಯಪ್‌ ಗ್ರೂಪ್‌'ನ ಅಡ್ಮಿನ್‌ ಆಗಿದ್ದ. ಈ ಗ್ರೂಪ್‌'ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ತಿರುಚಿ ಅಶ್ಲೀಲಗೊಳಿಸಿ ಅವಹೇಳನ ಮಾಡಿದ್ದ ಫೋಟೋವೊಂದು ಹರಿದಾಡಿತ್ತು. ಈ ಸಂಬಂಧ ಆನಂದ ಮಂಜುನಾಥ ನಾಯ್ಕ ಎಂಬುವರು ಮುರಡೇಶ್ವರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಗಣೇಶ ನಾಯ್ಕ ಎಂಬಾತನನ್ನೂ ಪೊಲೀಸರು ಬಂಧಿಸಿದ್ದು ಆತನಿಗೆ ನ್ಯಾಯಾಲಯದಲ್ಲಿ ಜಾಮೀನು ದೊರೆತಿದೆ. ಬಾಲಕೃಷ್ಣ ನಾಯ್ಕ ಎಂಬಾತ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಕನ್ನಡಪ್ರಭ ವಾರ್ತೆ
epaper.kannadaprabha.in

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌