ಸರ್ಕಾರ ದೇಶದ ಎಲ್ಲರ ಫೋನ್ ಕರೆ ಕದ್ದಾಲಿಸುತ್ತಿದೆ!

Published : Aug 16, 2018, 03:48 PM ISTUpdated : Sep 09, 2018, 10:08 PM IST
ಸರ್ಕಾರ ದೇಶದ ಎಲ್ಲರ ಫೋನ್ ಕರೆ ಕದ್ದಾಲಿಸುತ್ತಿದೆ!

ಸಾರಾಂಶ

ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿದಲ್ಲಿ ಆ ಗ್ರೂಪ್‌ನ ಅಡ್ಮಿನ್ ತೊಂದರೆಗೆ ಸಿಲುಕಬಹುದು, ಜೈಲೂ ಸೇರಬಹುದು. ಈ ಸಂದೇಶದ ವಿಶ್ವಾಸಾರ್ಹತೆಗಾಗಿಯೇ ಕೊಲ್ಕತ್ತಾ ಪೊಲೀಸ್ ಫೇಸ್‌ಬುಕ್ ಪೇಜ್‌ನೊಂದಿಗೆ ಟ್ಯಾಗ್ ಮಾಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿಗಳು ಮತ್ತು ಕೋಮು ಸಂಘರ್ಷಕ್ಕೆ ಎಡೆಮಾಡುವಂತಹ ಸಂದೇಶಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರತಿಯೊಬ್ಬರ ಫೋನ್ ಕಾಲ್ ಹಾಗೂ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುತ್ತಿದೆ ಎಂಬ ಸಂದೇಶವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೀಗೆ ಹರಿದಾಡುತ್ತಿರುವ ಸಂದೇಶದಲ್ಲಿ,‘ನಾಳೆಯಿಂದಲೇ ಸರ್ಕಾರ ನಮ್ಮ ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಡುತ್ತದೆ. ನಿಮ್ಮ ಎಲ್ಲಾ ಕರೆಗಳು, ವಾಟ್ಸ್‌ಆ್ಯಪ್, ಫೇಸ್‌ಬುಕ್ ದಾಖಲೆ ಗಳು ಸಚಿವಾಲಯದಲ್ಲಿ ದಾಖಲಾಗುತ್ತವೆ. ಅನಗತ್ಯ ಸಂದೇಶಗಳನ್ನು ರವಾನಿಸುವ ಮುನ್ನ ಎಚ್ಚರವಿರಲಿ. ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸಿದಲ್ಲಿ ಆ ಗ್ರೂಪ್‌ನ ಅಡ್ಮಿನ್ ತೊಂದರೆಗೆ ಸಿಲುಕಬಹುದು, ಜೈಲೂ ಸೇರಬಹುದು.

ಈ ಸಂದೇಶದ ವಿಶ್ವಾಸಾರ್ಹತೆಗಾಗಿಯೇ ಕೊಲ್ಕತ್ತಾ ಪೊಲೀಸ್ ಫೇಸ್‌ಬುಕ್ ಪೇಜ್‌ನೊಂದಿಗೆ ಟ್ಯಾಗ್ ಮಾಡಲಾಗಿದೆ. ಈ ಸಂಬಂಧ ಯಾವುದಾದರೂ ಪ್ರಶ್ನೆಗಳಿದ್ದಲ್ಲಿ, ಇನ್‌ಬಾಕ್ಸ್‌ಗೆ ಸಂದೇಶ ಕಳುಹಿಸಿ’ ಎಂದು ಹೇಳಲಾಗಿದೆ. ಈ ಸಂದೇಶ ಸದ್ಯ ವೈರಲ್ ಆಗಿದೆ. ಆದರೆ ನಿಜಕ್ಕೂ ಸರ್ಕಾರ ಪ್ರತಿಯೊಬ್ಬರ  ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದೆಯೇ ಎಂದು ಪರಿಶೀಲಿಸಿದಾಗ ಇದೊಂದು ಸುಳ್ಳು ಸುದ್ದಿ ಎಂಬುದು ಸ್ಪಷ್ಟವಾಗಿದೆ.

ಕೊಲ್ಕತ್ತಾ ಪೊಲೀಸರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ‘ಇದೊಂದು ಸುಳ್ಳುಸುದ್ದಿ, ಈ ರೀತಿ ಸುಳ್ಳುಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದಿದ್ದಾರೆ. ವಾಸ್ತವವಾಗಿ ಸರ್ಕಾರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿಲ್ಲ. ಅದು ಸಾಧ್ಯವೂ ಇಲ್ಲ. ಮೊಬೈಲ್ ಹ್ಯಾಕ್ ಆದಾಗ ಮಾತ್ರ ಬೇರೊಬ್ಬರು ನಿಮ್ಮ ವಾಟ್ಸ್‌ಆ್ಯಪ್ ಅನ್ನು ಗಮನಿಸುತ್ತಿರಬಹುದಷ್ಟೆ.  ಅಲ್ಲದೆ ಈ ಸಂದೇಶದಲ್ಲಿ ಉಲ್ಲೇಖಿಸಿದಂತೆ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವ ಯಾವುದೇ ಸಚಿವಾಲಯವೂ ಅಸ್ತಿತ್ವದಲ್ಲಿಲ್ಲ.

[ವೈರಲ್ ಚೆಕ್ ಅಂಕಣ]

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!