
ನವದೆಹಲಿ(ಆ.01): ದೇಶದ 81 ಕೋಟಿ ಮಂದಿಗೆ ರಿಯಾಯಿತಿ ದರದಲ್ಲಿ 2 ರೂ.ಗೆ ಗೋಧಿ ಹಾಗೂ 3 ರೂ.ಗೆ ಅಕ್ಕಿ ನೀಡುತ್ತಿರುವ ಯೋಜನೆಯನ್ನು 2018ರವರೆಗೆ ಮುಂದುವರಿಸಲಾಗುವುದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್'ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನಾವಳಿ ವೇಳೆಯಲ್ಲಿ ಮಾತನಾಡಿದ ಅವರು,ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ(ಎನ್'ಎಫ್'ಎಸ್ಎ)2013ರ ಪ್ರಕಾರ ಪ್ರತಿ 3 ವರ್ಷಗಳಿಗೊಮ್ಮೆ ಆಹಾರಪದಾರ್ಥ'ಗಳ ಬೆಲೆಗಳನ್ನು ಪರಿಷ್ಕರಣೆ ಮಾಡಬೇಕಾಗುತ್ತದೆ. ಆದಾಗ್ಯೂ ನಾವು ಪ್ರಸ್ತುತ ಯೋಜನೆಯನ್ನು 2018ರವರೆಗೂ ಮುಂದುವರಿಸಲು ನಿರ್ಧರಿಸಿದ್ದೇವೆ.
ಈ ಯೋಜನೆಯಡಿಯಲ್ಲಿ ಪ್ರತಿ ಕೆಜಿ ಅಕ್ಕಿಗೆ 3 ರೂ.ಗೋಧಿಗೆ 2 ರೂ. ಹಾಗೂ ಏಕದಳ ಪದಾರ್ಥಗಳಿಗೆ ಪ್ರತಿ ಕೆಜಿಗೆ 1 ರೂ. ದರದಲ್ಲಿ ನೀಡಲಾಗುತ್ತಿದೆ. ಕೇಂದ್ರ ಸರ್ಕಾರವು ಅತ್ಯುತ್ತಮ ಯೋಜನೆ ಜಾರಿಗೊಳಿಸಿದ್ದು, ಯಾರೊಬ್ಬರನ್ನು ಉಪವಾಸದಿಂದ ಇರಿಸಬಾರದೆಂಬ ಜವಾಬ್ದಾರಿ ರಾಜ್ಯ ಸರ್ಕಾರಗಳಾದ್ದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.