
ತಿರುವನಂತಪುರಂ: ಹಾಲಿ ಭೀಕರ ಮಳೆ, ಪ್ರವಾಹದಿಂದ ತತ್ತರಿಸಿರುವ ಕೇರಳದಲ್ಲಿ 1924 ರಲ್ಲೂ ಇಂಥದ್ದೇ ದುರ್ಘಟನೆ ಸಂಭವಿಸಿತ್ತು. ಅಂದು ಮಹಾತ್ಮ ಗಾಂಧೀಜಿಯವರು 6000 ರು. ದೇಣಿಗೆ ಸಂಗ್ರಹಿಸಿ ಸಹಾಯ ಮಾಡಿದ್ದರು ಎಂಬ ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ.
ಮಲೆಯಾಳಂ ಕ್ಯಾಲೆಂಡರ್ ‘ಕೊಲ್ಲ ವರ್ಷಂ 1099 ’ರಲ್ಲಿ ಇಂತಹುದೇ ಪ್ರವಾಹ ಸಂಭವಿಸಿದ್ದುದರಿಂದ ಇದನ್ನು ‘99ರ ಭೀಕರ ಪ್ರವಾಹ’ ಎಂದೇ ಕರೆಯಲಾಗುತ್ತದೆ. ಅಂದಿನ ಸನ್ನಿವೇಶ ಮತ್ತು ಗಾಂಧೀಜಿಯವರ ಪ್ರಯತ್ನವನ್ನು ಆಗ ವಿದ್ಯಾರ್ಥಿಯಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಕೆ.ಅಯ್ಯಪ್ಪನ್ ಪಿಳ್ಳೈ ಸ್ಮರಿಸಿದ್ದಾರೆ. 1924 ರ ಪ್ರವಾಹದ ಸಂದರ್ಭವೂ ಮುಲ್ಲಪೆರಿಯಾರ್ ಅಣೆಕಟ್ಟು ಬಾಗಿಲು ತೆರೆದಿದ್ದುದು ಹೆಚ್ಚಿನ ಅನಾಹುತಕ್ಕೆ ಕಾರಣವಾಗಿತ್ತು.
ಆಗ ಕೇರಳದ ಬಹುತೇಕ ಜಿಲ್ಲೆಗಳಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡು ವ್ಯಾಪಕ ಹಾನಿಗಳಾಗಿದ್ದವು. ಪ್ರವಾಹಕ್ಕೆ ಸಂಬಂಧಿಸಿ ಗಾಂಧೀಜಿಯವರು ತಮ್ಮ ‘ಯಂಗ್ ಇಂಡಿಯಾ’ ಮತ್ತು ‘ನವಜೀವನ’ ಪತ್ರಿಕೆಯಲ್ಲಿ ಸಾಕಷ್ಟು ಲೇಖನಗಳನ್ನು ಪ್ರಕಟಿಸಿ, ಪ್ರವಾಹ ಪೀಡಿತ ಮಲಬಾರ್(ಕೇರಳ)ಗೆ ದೇಣಿಗೆ ನೀಡುವಂತೆ ಜನತೆಯಲ್ಲಿ ವಿನಂತಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.