ಬೆಂಗಳೂರು ಸನ್ನಿವೇಶ ಇರಿಸಿಕೊಂಡು ದೀದಿ ಕಾಲೆಳೆದರಾ ಮೋದಿ..?

Published : May 26, 2018, 12:20 PM ISTUpdated : May 26, 2018, 12:21 PM IST
ಬೆಂಗಳೂರು ಸನ್ನಿವೇಶ ಇರಿಸಿಕೊಂಡು ದೀದಿ ಕಾಲೆಳೆದರಾ ಮೋದಿ..?

ಸಾರಾಂಶ

ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭ ದಿನ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ವಲ್ಪದೂರ ನಡೆದುಕೊಂಡು ಬಂದಿದ್ದರು. ಅದು ಬ್ಯಾನರ್ಜಿಗೆ ಕೋಪ ತರಿಸಿದ್ದು, ಕರ್ನಾಟಕ ಡಿಜಿಪಿ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು ಎನ್ನಲಾಗಿತ್ತು.

ಕೋಲ್ಕತಾ: ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭ ದಿನ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸ್ವಲ್ಪದೂರ ನಡೆದುಕೊಂಡು ಬಂದಿದ್ದರು. ಅದು ಬ್ಯಾನರ್ಜಿಗೆ ಕೋಪ ತರಿಸಿದ್ದು, ಕರ್ನಾಟಕ ಡಿಜಿಪಿ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು ಎನ್ನಲಾಗಿತ್ತು.

ಇದೇ ಸನ್ನಿವೇಶವನ್ನಿಟ್ಟುಕೊಂಡು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರ ಬಂಗಾಳ ಭೇಟಿಯ ವೇಳೆ, ಹೆಲಿಪ್ಯಾಡ್‌ನಲ್ಲಿ ಮಮತಾ ಬ್ಯಾನರ್ಜಿ ಅವರ ಕಾಲೆಳೆದಿದ್ದಾರೆ ಎನ್ನಲಾದ ವೀಡಿಯೊ ಒಂದು ವೈರಲ್ ಆಗಿದೆ. ಮೋದಿಗೆ ಸಾಂಪ್ರದಾಯಿಕ ಸ್ವಾಗತ ನೀಡಲು ಬ್ಯಾನರ್ಜಿ ಹೆಲಿಪ್ಯಾಡ್‌ಗೆ ಆಗಮಿಸಿದ್ದರು. ಬ್ಯಾನರ್ಜಿ ಹೂಗುಚ್ಛ ನೀಡಿ ಪ್ರಧಾನಿಗೆ ಸ್ವಾಗತ ಕೋರುತ್ತಾರೆ. 

ಈ ವೇಳೆ ಮೋದಿಯವರ  ಕೈಸನ್ನೆಯ ಹಾವಭಾವ ಬೆಂಗಳೂರಿನ ಘಟನೆಗೆ ಸಂಬಂಧಿಸಿ, ಅವರು ಬ್ಯಾನರ್ಜಿಯ ಕಾಲೆಳೆದಂತಿದೆ ಎಂದು ಅರ್ಥೈಸಲಾಗಿದೆ. ಮೋದಿ ಏನು ಹೇಳಿದ್ದರು ಎಂಬ ಆಡಿಯೊ ಇಲ್ಲ. ಆದರೆ, ಬ್ಯಾನರ್ಜಿ ನಡೆದುಕೊಂಡು ಬಂದುದನ್ನು ಕೈಸನ್ನೆಯಲ್ಲಿ ತೋರಿಸಿದಂತಿರುವ ಪ್ರಧಾನಿಯ ಹಾವಭಾವ, ಅಷ್ಟು ದೂರದಿಂದ ನಡೆದುಕೊಂಡು ಬಂದು ಕಾಲು ನೋವಾಯಿತೇ? ಎಂದು ಕೇಳಿದಂತಿದೆ ಎಂದು ವ್ಯಂಗ್ಯವಾಡಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಮೊದಲ ಹೈಡ್ರೋಜನ್‌ ಚಾಲಿತ ವಾಟರ್‌ ಟ್ಯಾಕ್ಸಿ ವಾರಾಣಸಿಯಲ್ಲಿ ಶುರು
ಎಐ ನಿರ್ಮಾತೃಗಳಿಗೆ 2025ರ ಟೈಮ್ ವರ್ಷದ ವ್ಯಕ್ತಿ ಗೌರವ!