
ಮುಂಬೈ(ಮಾ.03): ದ.ಆಫ್ರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಹಿಂದಿರುಗಿದ ಟೀಂ ಇಂಡಿಯಾ ವೇಗಿ ಶಾರ್ದೂಲ್ ಠಾಕೂರ್, ವಿಮಾನ ಇಳಿದವರೇ ಸೀದಾ ಮುಂಬೈನ ಸ್ಥಳೀಯ ರೈಲು ಏರಿದ್ದಾರೆ. ಅಚ್ಚರಿ ಎನಿಸಿದರು ಇದು ಸತ್ಯ.
ಕಳೆದವಾರ ಆಫ್ರಿಕಾ ಪ್ರವಾಸದಿಂದ ಭಾರತಕ್ಕೆ ಹಿಂದಿರುಗಿದ ಶಾರ್ದೂಲ್, ಮುಂಬೈನ ಅಂಧೇರಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಲ್ಲಿ ಸಾಮಾನ್ಯರಂತೆ ಸಾಲಿನಲ್ಲಿ ನಿಂತು ಟಿಕೆಟ್ ಪಡೆದು ಪಾಲ್ಗರ್ ತನಕ ಪಯಣಿಸಿದ್ದಾರೆ.
26 ವರ್ಷದ ಶಾರ್ದೂಲ್ ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ 4 ವಿಕೆಟ್ ಪಡೆದು ಗಮನ ಸೆಳೆದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.