
ನವದೆಹಲಿ(ಫೆ.26): ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್ ನೆಲದಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಮಧ್ಯರಾತ್ರಿ ನಡೆದ ಈ ಕಾರ್ಯಾಚರಣೆಯ ಪಿನ್ ಟು ಪಿನ್ ಮಾಹಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಪಡೆದಿದ್ದರು.
ಪ್ರಧಾನಿ ನರೇಂದ್ರ ಮೋದಿ, ಮಧ್ಯರಾತ್ರಿ 3-30ರವರೆಗೂ ಪ್ರಧಾನಿ ಕಚೇರಿಯಲ್ಲೇ ಇದ್ದು, ದಾಳಿಯ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ದಾಳಿಯ ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದ ಮೋದಿ, ದಾಳಿ ಯಶಸ್ವಿಯಾದ ನಂತರವಷ್ಟೇ ಪ್ರಧಾನಿ ಕಚೇರಿಯಿಂದ ತೆರಳಿದರು.
ಪಾಕ್ ವಿರುದ್ಧದ ದಾಳಿಗೆ ಎಲ್ಲೆಡೆ ಸಂಭ್ರಮ
ಈ ವೇಳೆ ಮೋದಿ ಅವರೊಂದಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋಔಲ್ ಕೂಡ ಜೊತೆಗಿದ್ದು, ವಾಯುಸೇನೆ ಮುಖ್ಯಸ್ಥರು ಆಪರೇಷನ್ ಮೇಲುಸ್ತುವಾರಿ ವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.