ಪ್ರತಾಪ್ ಸಿಂಹ ಎಲ್ಲಿದ್ದಾರೆ? ಅಂಕಣ ಬರೆಯೋದು ಬಿಟ್ಟು ಬೇರೇನು ಮಾಡುತ್ತಿದ್ದಾರೆ? ಹೆಚ್.ವಿಶ್ವನಾಥ್ ಪ್ರಶ್ನೆ

Published : Sep 21, 2016, 08:30 AM ISTUpdated : Apr 11, 2018, 01:04 PM IST
ಪ್ರತಾಪ್ ಸಿಂಹ ಎಲ್ಲಿದ್ದಾರೆ? ಅಂಕಣ ಬರೆಯೋದು ಬಿಟ್ಟು ಬೇರೇನು ಮಾಡುತ್ತಿದ್ದಾರೆ? ಹೆಚ್.ವಿಶ್ವನಾಥ್ ಪ್ರಶ್ನೆ

ಸಾರಾಂಶ

ನವದೆಹಲಿ(ಸೆ. 21): ಕಾವೇರಿ ಸೀಮೆ ಜನಪ್ರತಿನಿಧಿಗಳು ಖಡಕ್ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ವಿಷಾದ ವ್ಯಕ್ತಪಡಿಸಿದ್ದಾರೆ. ಇಂದು ಸಂಸತ್ ಭವನದ ಎದುರು ಕಾವೇರಿ ವಿಚಾರವಾಗಿ ಧರಣಿ ನಡೆಸುತ್ತಿರುವ ಮೈಸೂರಿನ ವಿಶ್ವನಾಥ್ ಅವರು ಈ ವೇಳೆ ಸುವರ್ಣನ್ಯೂಸ್ ಜೊತೆ ಮಾತನಾಡತ್ತಾ ಪ್ರತಾಪ್ ಸಿಂಹ ಮೊದಲಾದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. "ಪ್ರತಾಪ್ ಸಿಂಹ ಎಲ್ಲಿದ್ದಾರೆ? ಪುಸ್ತಕ ಗಿಸ್ತಕ ಬರೆದುಕೊಂಡಿದ್ದಾರೋ ಗೊತ್ತಿಲ್ಲ. ಅವರು ಅಂಕಣ ಬರೆಯುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ?" ಎಂದು ಹೆಚ್.ವಿಶ್ವನಾಥ್ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ.

ಕಾವೇರಿ ಕೊಳ್ಳ ಭಾಗದ ಸಂಸದರಾದ ಧೃವನಾರಾಯಣ್, ಪ್ರತಾಪ್ ಸಿಂಹ ಹಾಗೂ ಹೆಚ್.ಡಿ.ದೇವೇಗೌಡರು ರಾಜೀನಾಮೆ ನೀಡಬೇಕು ಎಂದೂ ವಿಶ್ವನಾಥ್ ಆಗ್ರಹಿಸಿದ್ದಾರೆ.

ಕಾವೇರಿ ವಿಚಾರದಲ್ಲಿ ಮೌನವಾಗಿರುವ ನರೇಂದ್ರ ಮೋದಿಯವರನ್ನು ಟೀಕಿಸಿದ ವಿಶ್ವನಾಥ್, "ಕರ್ನಾಟಕಕ್ಕೆ ನೀರು ಬೇಕೆಂದು ಯಾರನ್ನು ಕೇಳೋಣ? ಉಗಾಂಡದ ಅಧ್ಯಕ್ಷರನ್ನು ಕೇಳಲೇ? ಪ್ರಧಾನಿ ಮೋದಿಯವರನ್ನು ನಾವು ಕೇಳಬೇಕಲ್ಲವೇ.! ಇದೇನಾ ಅಚ್ಛೇ ದಿನ್ ಮೋದಿಯವರೇ?" ಎಂದು ಹಿರಿಯ ಕಾಂಗ್ರೆಸ್ ಮುಖಂಡರು ಟೀಕಿಸಿದ್ದಾರೆ.

ಸರ್ವಪಕ್ಷದ ಸಭೆಗೆ ಬಿಜೆಪಿ ಬರೋದಿಲ್ಲವೆಂದು ನೀಡಿದ ಹೇಳಿಕೆಯನ್ನು ಪ್ರಸ್ತಾಪಿಸಿದ ವಿಶ್ವನಾಥ್, ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. "ಅಖಂಡ ಕರ್ನಾಟಕದ ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಬೇಕು. ಸಭೆಗೆ ಬರೋದಿಲ್ಲವೆಂದು ಬಿಜೆಪಿ ಹೇಳೋದು ಸರಿಯಲ್ಲ" ಎಂದು ವಿಶ್ವನಾಥ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಕುರ್ಚಿ ಗೊಂದಲದಿಂದಾಗಿ ರಾಜ್ಯದಲ್ಲಿ ಅಸ್ತಿರತೆ ಸೃಷ್ಟಿ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ
ಕಾಂಗ್ರೆಸ್ಸಿನಿಂದ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಸಂಸದ ಬೊಮ್ಮಾಯಿ