ರಮೇಶ್‌ ಜಾರಕಿಹೊಳಿ ಎಲ್ಲಿ..? ಸತೀಶ್ ಜಾರಕಿಹೊಳಿ ಹೇಳಿದ್ದೇನು..?

Published : Dec 26, 2018, 11:26 AM IST
ರಮೇಶ್‌ ಜಾರಕಿಹೊಳಿ ಎಲ್ಲಿ..?  ಸತೀಶ್ ಜಾರಕಿಹೊಳಿ ಹೇಳಿದ್ದೇನು..?

ಸಾರಾಂಶ

ಸಂಪುಟ ವಿಸ್ತರಣೆ ಬಳಿಕ ಅಸಮಾಧಾನಗೊಂಡ ರಮೇಶ್ ಜಾರಕಿಹೊಳೀ ನಿಗೂಢವಾಗಿ ತೆರಳಿದ್ದು ಈ ಬಗ್ಗೆ ಸಹೋದರ ಸತಿಶ್ ಜಾರಕಿಹೊಳಿ ಮಾತನಾಡಿದ್ದಾರೆ. ಅವರು ಎಲ್ಲಿದ್ದಾರೆ ಎನ್ನುವುದು ತಮಗೆ ತಿಳಿದಿದೆ. ತಾವು ಅವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ. 

ಬೆಂಗಳೂರು :  ಸಚಿವ ಸ್ಥಾನದಿಂದ ಕೈಬಿಟ್ಟಿರುವ ಕುರಿತು ಅಸಮಾಧಾನ ಹೊಂದಿರುವ ತಮ್ಮ ಸಹೋದರ ರಮೇಶ್‌ ಜಾರಕಿಹೊಳಿ ಎಲ್ಲೂ ಹೋಗಿಲ್ಲ. ಅವರೊಂದಿಗೆ ಖುದ್ದು ನಾನೇ ಮಾತನಾಡುತ್ತೇನೆ ಎಂದು ನೂತನ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಮಂಗಳವಾರ ಸಂಜೆ ಕುಮಾರಕೃಪಾ ಅತಿಥಿಗೃಹದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನಾನು ಯಾವುದೇ ನಿರ್ದಿಷ್ಟಖಾತೆಯ ನಿರೀಕ್ಷೆ ಹೊಂದಿಲ್ಲ. ಪಕ್ಷ ಯಾವ ಖಾತೆಯನ್ನು ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ. ನೂತನವಾಗಿ ಸಚಿವ ಸ್ಥಾನ ನೀಡಿರುವುದರಿಂದ ವೇಣುಗೋಪಾಲ್‌ರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲು ಬಂದಿದ್ದೆ. ನಾಳೆ ಮಾತನಾಡುವುದಾಗಿ ಹೇಳಿದ್ದಾರೆ. ಹೀಗಾಗಿ ಇಂದು ಯಾವುದೇ ಮಾತುಕತೆ ನಡೆಸಿಲ್ಲ ಎಂದರು.

ಸಹೋದರನ ಅತೃಪ್ತಿ ಬಗ್ಗೆ ಮಾತನಾಡಿದ ಅವರು, ರಮೇಶ್‌ ಜಾರಕಿಹೊಳಿ ಗೋಕಾಕ್‌ನಲ್ಲಿ ಇದ್ದಾರೆ. ಅವರ ಬಳಿ ನಾನೇ ಮಾತನಾಡುತ್ತೇನೆ. ರಮೇಶ್‌ ಜಾರಕಿಹೊಳಿ ಬುಧವಾರ ಪಕ್ಷದ ಹಿರಿಯರನ್ನು ಭೇಟಿ ಮಾಡುತ್ತಾರೆ. ಅವರು ಎಲ್ಲೂ ಹೋಗಿಲ್ಲ ಎಂದು ಹೇಳಿದರು.

ಇದೇ ವೇಳೆ ನೂತನ ಸಚಿವ ಎಂ.ಬಿ. ಪಾಟೀಲ್‌ ಮಾತನಾಡಿ, ಕೆ.ಸಿ. ವೇಣುಗೋಪಾಲ್‌ ಅವರನ್ನು ಭೇಟಿ ಮಾಡಲು ಬಂದಿದ್ದೆವು. ನಾಳೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರದಂತೆ ಯಾವುದೇ ಖಾತೆ ನೀಡಿದರೂ ಸ್ವೀಕರಿಸುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿವ್ಯಾಂಗ ಯುವತಿ ಮೇಲೆ ಬಲಾತ್ಕಾರ: ಯಾರಿಗೂ ಹೇಳದಂತೆ ಬೆದರಿಕೆ!
ಹೋರಾಟದ ದನಿ ಅಡಗಿಸಲು ಈ ದೂರೇ? ರೈತರು, ಕನ್ನಡ ಪರ ಹೋರಾಟಗಾರರ ವಿರುದ್ಧ ತಲಾ 41 ಪ್ರಕರಣ ದಾಖಲು!