ರಾಜ್ಯ ಸರ್ಕಾರಕ್ಕೆ ಅಂಟಿತೇ ಲೋಕಾ ಕಳಂಕ..?

Published : Dec 07, 2017, 11:38 AM ISTUpdated : Apr 11, 2018, 12:46 PM IST
ರಾಜ್ಯ ಸರ್ಕಾರಕ್ಕೆ ಅಂಟಿತೇ ಲೋಕಾ ಕಳಂಕ..?

ಸಾರಾಂಶ

ಲೋಕಾಯುಕ್ತವನ್ನು ರಾಜ್ಯ ಸರ್ಕಾರ ಹಲ್ಲಿಲ್ಲದ ಹಾವು ಮಾಡಿದೆ -  ಶೇ. 21 ಭ್ರಷ್ಟಾಚಾರ ಮುಚ್ಚಿಕೊಳ್ಳಲು ದುರ್ಬಲ ಮಾಡಿದ್ದರೂ ಮಾಡಿರಬಹುದು – ಶೇ.14 ಖಂಡಿತಾ ಸಿದ್ದರಾಮಯ್ಯ ನೇತೃತ್ವದ ಸರ್ಕಾರ  ಈ ಕೆಲಸ ಮಾಡಿಲ್ಲ – ಶೇ. 18 ಸ್ವಾರ್ಥಕ್ಕಾಗಿ ಲೋಕಾಯುಕ್ತವನ್ನು ಸರ್ಕಾರ ದುರ್ಬಲ ಮಾಡಿದೆಯೋ ಇಲ್ಲವೋ ಗೊತ್ತಿಲ್ಲ – ಶೇ. 19

ಬೆಂಗಳೂರು(ಡಿ.7): ಭ್ರಷ್ಟರಿಗೆ ಸಿಂಹಸ್ವಪ್ನವಾಗಿದ್ದ ಕರ್ನಾಟಕ ಲೋಕಾಯುಕ್ತ ಸಂಸ್ಥೆ ದೇಶಾದ್ಯಂತ ಗಮನಸೆಳೆದಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಪ್ರಕರಣಗಳ ತನಿಖೆ ನಡೆಸಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಂಬ ಪ್ರತ್ಯೇಕ ಸಂಸ್ಥೆಯನ್ನು ಸ್ಥಾಪಿಸಿತು. ಇದು ಲೋಕಾಯುಕ್ತದ ಶಕ್ತಿ ಕುಂದಿಸುವ ಯತ್ನ ಎಂಬ ಟೀಕೆ, ಆಕ್ರೋಶ ಆ ವೇಳೆ ವ್ಯಕ್ತವಾಗಿತ್ತು.

ಜನಸಾಮಾನ್ಯರಲ್ಲಿ ಈಗಲೂ ಅದೇ ಭಾವನೆ ಇದೆ ಎಂಬ ಅಂಶ ಸಮೀಕ್ಷೆಯಿಂದ ತಿಳಿದುಬಂದಿದೆ. ಲೋಕಾ ಯುಕ್ತವನ್ನು ಸರ್ಕಾರ ದುರ್ಬಲಗೊಳಿಸಿದೆ,ದುರ್ಬಲ ಮಾಡಿರಬಹುದು ಎಂದು ಹೇಳಿದವರ ಸಂಖ್ಯೆ ಶೇ.50ಕ್ಕಿಂತ ಹೆಚ್ಚಿರುವುದು ಗಮನಾರ್ಹ. ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲಿ ಈ ಭಾವನೆ ಹೆಚ್ಚಾಗಿದೆ. ವಿವಿಧ ಜಾತಿಗಳ ಪೈಕಿ ಲಿಂಗಾಯತರು, ವಿವಿಧ ಪ್ರಾಂತ್ಯಗಳ ಪೈಕಿ ಲಿಂಗಾಯತ ಬಾಹುಳ್ಯದ ಮುಂಬೈ ಕರ್ನಾಟಕದಲ್ಲಿ ಸರ್ಕಾರ ಲೋಕಾಯುಕ್ತವನ್ನು ದುರ್ಬಲ ಮಾಡಿರಬಹುದು ಎಂಬ ಅಭಿಪ್ರಾಯ ಗಟ್ಟಿಯಾಗಿ ಕೇಳಿಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರೀಡಾ ಕ್ಷೇತ್ರದಲ್ಲಿದ್ದ ಪಕ್ಷಪಾತಕ್ಕೆ ಹಿಂದೆಯೇ ಕಡಿವಾಣ : ಪ್ರಧಾನಿ ನರೇಂದ್ರ ಮೋದಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿ.ಕೆ.ಶಿವಕುಮಾರ್‌