ಅಮಿತ್ ಶಾಗೆ ವ್ಯವಹಾರ ಜ್ಞಾನವಿಲ್ಲ; ಕ್ರಿಮಿನಲ್ ತಂತ್ರಗಾರಿಕೆ ಮಾತ್ರ ಬರುತ್ತೆ: ಸಿಎಂ ವಾಗ್ದಾಳಿ

Published : Aug 16, 2017, 09:23 PM ISTUpdated : Apr 11, 2018, 01:05 PM IST
ಅಮಿತ್ ಶಾಗೆ ವ್ಯವಹಾರ ಜ್ಞಾನವಿಲ್ಲ; ಕ್ರಿಮಿನಲ್ ತಂತ್ರಗಾರಿಕೆ ಮಾತ್ರ ಬರುತ್ತೆ: ಸಿಎಂ ವಾಗ್ದಾಳಿ

ಸಾರಾಂಶ

ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಜೆಪಿಯವರು ವಿರೋಧಿಸಿದರು. ಪಾರ್ಕ್​ಗಳನ್ನು ವಶಪಡಿಸಿಕೊಳ್ತಿದ್ದಾರೆ ಎಂದು ಹೇಳಿದರು. ಇಂದಿರಾ ಕ್ಯಾಂಟೀನ್​ ಆರಂಭಕ್ಕೆ ಸಾಕಷ್ಟು ಅಡ್ಡಿಪಡಿಸಿದರು. ಆದರೆ ಯಾವುದೇ ಪಾರ್ಕ್ ಜಾಗವನ್ನು ಸ್ವಾಧೀನಪಡಿಸಿಕೊಂಡಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು  ಎಂದು ಕಾಂಗ್ರೆಸ್ ಸಾರ್ಥಕ ಸಮಾವೇಶದಲ್ಲಿ  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ಆ.16):  ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಜೆಪಿಯವರು ವಿರೋಧಿಸಿದರು. ಪಾರ್ಕ್​ಗಳನ್ನು ವಶಪಡಿಸಿಕೊಳ್ತಿದ್ದಾರೆ ಎಂದು ಹೇಳಿದರು. ಇಂದಿರಾ ಕ್ಯಾಂಟೀನ್​ ಆರಂಭಕ್ಕೆ ಸಾಕಷ್ಟು ಅಡ್ಡಿಪಡಿಸಿದರು. ಆದರೆ ಯಾವುದೇ ಪಾರ್ಕ್ ಜಾಗವನ್ನು ಸ್ವಾಧೀನಪಡಿಸಿಕೊಂಡಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು  ಎಂದು ಕಾಂಗ್ರೆಸ್ ಸಾರ್ಥಕ ಸಮಾವೇಶದಲ್ಲಿ  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಬಡವರು, ದಲಿತರ ಪರವಾದ ಪಕ್ಷ. ಇಂದಿರಾ ಗಾಂಧಿ ಬಡವರ ಪರವಾಗಿ ಕೆಲಸ ಮಾಡಿದ್ದಾರೆ.  ಇಂದು ಬಡವರು ಇಂದಿರಾ ಗಾಂಧಿ ಫೋಟೋ ಇಟ್ಟು ಪೂಜಿಸುತ್ತಿದ್ದಾರೆ. ಮೋದಿ ಸರ್ಕಾರ ಮಾತಿನಲ್ಲೇ ಮಂಟಪ ಕಟ್ಟುತ್ತಿದ್ದಾರೆ.  ನೋಟ್​ ಬ್ಯಾನ್ ಮಾಡಿ ಬಡವರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು  ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮ ಸರ್ಕಾರವನ್ನು ಬಿಜೆಪಿ ಭ್ರಷ್ಟ ಸರ್ಕಾರ ಎಂದು ಆರೋಪಿಸಿದೆ. ಭ್ರಷ್ಟಾಚಾರ ನಡೆಸಿದ್ದು ಹಿಂದಿನ ಬಿಜೆಪಿ ಸರ್ಕಾರ. ಯಡಿಯೂರಪ್ಪ, ಜನಾರ್ದನ ರೆಡ್ಡಿ ಜೈಲಿಗೆ ಹೋಗಿ ಬಂದರು.  ನಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಸಿಎಂ ಹೇಳಿದ್ದಾರೆ.  

ನನಗೆ ಲೆಕ್ಕ ಕೇಳಲು ಅಮಿತ್​ ಶಾ ಯಾರು? ಕೇಂದ್ರದಿಂದ ರಾಜ್ಯಕ್ಕೆ ಲಕ್ಷಾಂತರ ಹಣ ನೀಡಿದ್ದೇವೆ ಎನ್ನುತ್ತಾರೆ. ಅಮಿತ್ ಶಾ ಅವರಿಗೆ ಆರ್ಥಿಕ ವ್ಯವಹಾರದ ಜ್ಞಾನವಿಲ್ಲ. ಅಮಿತ್ ಶಾ ಅವರಿಗೆ ಕ್ರಿಮಿನಲ್ ತಂತ್ರಗಾರಿಕೆ ಮಾತ್ರ ಬರುತ್ತೆ  14ನೇ ಹಣಕಾಸು ಆಯೋಗ ರಾಜ್ಯಕ್ಕೆ ನೀಡುವ ಅನುದಾನದಲ್ಲಿ 10 ಸಾವಿರ ಕೋಟಿ ಹಣವನ್ನು ಕಡಿತಗೊಳಿಸಲಾಗಿದೆ. ನಮ್ಮ ಸರ್ಕಾರದ ಬಗ್ಗೆ ಮಾತಾಡುವ ನೈತಿಕತೆ ಬಿಜೆಪಿಗೆ ಇಲ್ಲ ಸಿಎಂ ವಾಗ್ದಾಳಿ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಡಿಸಿ ಟಾರ್ಗೆಟ್; ಎಂಇಎಸ್ ಪರ ನಿಂತು ಲೋಕಸಭೆ ಸ್ಪೀಕರ್‌ಗೆ ದೂರು ನೀಡಿದ ಮಹಾರಾಷ್ಟ್ರದ ಸಂಸದ ಮಾನೆ!
ಹಿಂದೂಗಳಿಗಿಂತ ಮುಸ್ಲಿಮರ ಮೇಲೆ ಹೆಚ್ಚು ಬಾಂಡ್: ಎಸ್‌ಡಿಪಿಐ ಆರೋಪಕ್ಕೆ ಅಂಕಿ-ಅಂಶ ಸಮೇತ ಕಮಿಷನರ್ ತಿರುಗೇಟು!