ಡಿ.ಕೆ. ಬ್ರದರ್ಸ್ ಬಂಧನವಾದ್ರೆ ಸರ್ಕಾರ ಖತಂ?: ಇಡಿ, ಐಟಿ ದಾಳಿ ಹಿಂದೆ ಮೋದಿ, ಬಿಎಸ್‌ವೈ?

Published : Sep 08, 2018, 06:15 PM ISTUpdated : Sep 09, 2018, 09:41 PM IST
ಡಿ.ಕೆ. ಬ್ರದರ್ಸ್ ಬಂಧನವಾದ್ರೆ ಸರ್ಕಾರ ಖತಂ?: ಇಡಿ, ಐಟಿ ದಾಳಿ ಹಿಂದೆ ಮೋದಿ, ಬಿಎಸ್‌ವೈ?

ಸಾರಾಂಶ

ಡಿ.ಕೆ. ಬ್ರದರ್ಸ್ ವಿರುದ್ದ ಇಡಿ, ಐಟಿ ದಾಳಿ ಹಿಂದೆ ಇರೋದು ಯಾರು?! ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಜಬರದಸ್ತ್ ಪ್ಲ್ಯಾನ್?! ಇಡಿ ಭೂತ ಬಿಟ್ಟಿರೋದು ಮೋದಿ, ಯಡಿಯೂರಪ್ಪ?! ಸಿಎಂ ಕುಮಾರಸ್ವಾಮಿ ಆರೋಪದಲ್ಲಿ ಹುರುಳಿದೆಯಾ?   

ಬೆಂಗಳೂರು(ಸೆ.8): ಡಿ.ಕೆ ಬ್ರದರ್ಸ್ ಗೆ ಪದೇ ಪದೇ ಐಟಿ, ಇಡಿ,ಸಿಬಿಐ ಭೂತ ಬಿಟ್ಟು ಹೆದರಿಸ್ತಿರೋದು ಕೇಂದ್ರ ಸರ್ಕಾರ ಎಂಬ ಗುಸುಗುಸು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. 

ಇಡಿ, ಐಟಿ ಕಾರ್ಯವೈಖರಿ ರಾಜ್ಯ ರಾಜಕಾರಣದಲ್ಲಿ ಗಂಭೀರವಾದ ಚರ್ಚೆಗೆ ಕಾರಣವಾಗಿದ್ದು, ಇಡಿಯಿಂದ ಪದೇ ಪದೇ ನೊಟೀಸ್, ಬಂಧನ ವಾರಂಟ್ ಬರುತ್ತಿರುವುದರ ಹಿಂದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೈವಾಡ ಇದೆ ಎಂಬ ಆರೋಪ ಕೇಳಿ ಬರುತ್ತಿದೆ.

ಇಂತದ್ದೇ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಸಿಎಂ ಕುಮಾರಸ್ವಾಮಿ, ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿ.ಎಸ್. ಯಡಿಯೂರಪ್ಪ ಮತ್ತು ಪ್ರಧಾನಿ ಮೋದಿ ನಡೆಸುತ್ತಿರುವ ರಾಜಕೀಯ ಆಟವೇ ಇಡಿ, ಐಟಿ ದಾಳಿ ಎಂಬರ್ಥದಲ್ಲಿ ಆರೋಪ ಮಾಡಿದ್ದಾರೆ.

ಬಿಎಸ್ ವೈ ಆಪ್ತರ ನಡೆಯನ್ನು ಅರಿತುಕೊಂಡೇ ಯಡಿಯೂರಪ್ಪ ವಿರುದ್ಧ ಕುಮಾರಸ್ವಾಮಿ ಇಂತಹ ಗಂಭೀರ ವಾಗ್ದಾಳಿ ನಡೆಸುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ. ಕೇಂದ್ರದ ತನಿಖಾ ಸಂಸ್ಥೆಗಳ ಹಿಂದೆ ರಾಜಕೀಯ ಲೆಕ್ಕಾಚಾರವಿದೆ ಎನ್ನುವುದು ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳಿಂದ ಸ್ಪಷ್ಟವಾಗುತ್ತದೆ ಎಂಬುದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿರುವ ಬಿಸಿ ಬಿಸಿ ಚರ್ಚೆ.

ಒಂದು ವೇಳೆ ಡಿ.ಕೆ. ಬ್ರದರ್ಸ್ ಬಂಧನವಾದರೆ ಸಮ್ಮಿಶ್ರ ಸರ್ಕಾರ ಉರುಳುವುದು ಖಚಿತವಾಗಿದ್ದು, ಇದಕ್ಕಾಗಿಯೇ ಕಾಯುತ್ತಿರುವ ಬಿಜೆಪಿ ಇಂತಹ ರಾಜಕೀಯ ದಾಳ ಉರುಳಿಸಿದೆ ಎಂದು ಹೇಳಲಾಗುತ್ತಿದೆ.

ಕೂಡಲೇ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿ ಯಡಿಯೂರಪ್ಪ ಅವರನ್ನು ಸಿಎಂ ಮಾಡದಿದ್ದರೆ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ೧೦ ಸೀಟುಗಳನ್ನು ಕೂಡ ಗೆಲ್ಲುವುದಿಲ್ಲ ಎಂಬ ಆತಂಕ ರಾಜ್ಯ ಬಿಜೆಪಿ ನಾಯಕರಲ್ಲಿದೆ. ಇದೇ ಕಾರಣಕ್ಕೆ ಇಡಿ, ಐಟಿ ಬಳಸಿಕೊಂಡು ಸರ್ಕಾರವನ್ನು ಉರುಳಿಸುವ ಯೋಜನೆ ರೂಪಿಸಲಾಗಿದೆ ಎಂಬುದು ಬಿಜೆಪಿ ವಿರುದ್ಧ ಸದ್ಯ ಕೇಳಿ ಬರುತ್ತಿರುವ ಗಂಭೀರ ಆರೋಪ.

ಒಂದು ವೇಳೆ ಲೋಕಸಭೆಗೂ ಮುನ್ನವೇ ಸಮ್ಮಿಶ್ರ ಸರ್ಕಾರ ಪತನವಾಗದಿದ್ದರೆ, ಬಿಎಸ್ ವೈ ಬಿಜೆಪಿಯಲ್ಲೇ ಮೂಲೆಗುಂಪಾಗಲಿದ್ದಾರೆ ಎಂಬುದು ಅವರ ಆಪ್ತರ ಆತಂಕವಾಗಿದೆ. ಹೀಗಾಘಿ ಹೇಗಾದರೂ ಮಾಡಿ ಮತ್ತೆ ಯಡಿಯೂರಪ್ಪ ಅವರನ್ನು ಸಿಎಂ ಮಾಡಲು ಅವರ ಆಪ್ತ ಬಣ ಮುಂದಾಗಿದ್ದು, ಅದಕ್ಕೆ ಮುಳುವಾಗಿರುವ ಈ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವುದೇ ಮಾರ್ಗ ಎಂಬುದು ಈ ಬಣದ ಲೆಕ್ಕಾಚಾರ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ಶಿಕ್ಷಣ ಹಬ್‌’ ಮಂಗಳೂರು ಈಗ ಡ್ರಗ್ಸ್‌ಗೂ ಕುಖ್ಯಾತ: ವಿದ್ಯಾರ್ಥಿಗಳೇ ಬಲಿಪಶು!
COVID-19 Vaccine: ಯುವಕರ ಹೃದಯಾಘಾತಕ್ಕೆ ಕೊರೊನಾ ಲಸಿಕೆ ಕಾರಣನಾ? AIIMS ವರದಿ ಬಹಿರಂಗ