ದೇವನಹಳ್ಳಿಯಲ್ಲಿ ಕಾಂಗ್ರೆಸ್’ನಿಂದ ಯಾರಿಗೆ ಸಿಗಲಿದೆ ಟಿಕೆಟ್..?

Published : Mar 07, 2018, 12:25 PM ISTUpdated : Apr 11, 2018, 12:41 PM IST
ದೇವನಹಳ್ಳಿಯಲ್ಲಿ ಕಾಂಗ್ರೆಸ್’ನಿಂದ ಯಾರಿಗೆ ಸಿಗಲಿದೆ ಟಿಕೆಟ್..?

ಸಾರಾಂಶ

ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಬಿ.ಆರ್. ನಾರಾಯಣಸ್ವಾಮಿ ಮತ್ತು ಮಾಜಿ ಶಾಸಕ ಚಂದ್ರಣ್ಣ ಆಕಾಂಕ್ಷಿ. ಇನ್ನು ಜೆಡಿಎಸ್‌ನಿಂದ ಹಾಲಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಈಗಾಗಲೇ ಟಿಕೆಟ್ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿ ಟಿಕೆಟ್ ಪಡೆದು ಪರಾಜಿತರಾಗಿದ್ದ ವೆಂಕಟಸ್ವಾಮಿ ಮತ್ತೆ ಟಿಕೆಟ್ ಆಕಾಂಕ್ಷಿ ಯಾಗಿದ್ದಾರೆ.

ದೇವನಹಳ್ಳಿ : ಬಿಜೆಪಿಯಿಂದ ಈ ಕ್ಷೇತ್ರದಲ್ಲಿ ಬಿ.ಆರ್. ನಾರಾಯಣಸ್ವಾಮಿ ಮತ್ತು ಮಾಜಿ ಶಾಸಕ ಚಂದ್ರಣ್ಣ ಆಕಾಂಕ್ಷಿ. ಇನ್ನು ಜೆಡಿಎಸ್‌ನಿಂದ ಹಾಲಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ಈಗಾಗಲೇ ಟಿಕೆಟ್ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್‌ನಿಂದ ಕಳೆದ ಬಾರಿ ಟಿಕೆಟ್ ಪಡೆದು ಪರಾಜಿತರಾಗಿದ್ದ ವೆಂಕಟಸ್ವಾಮಿ ಮತ್ತೆ ಟಿಕೆಟ್ ಆಕಾಂಕ್ಷಿ ಯಾಗಿದ್ದಾರೆ.

ಆದರೆ, ಕ್ಷೇತ್ರದಲ್ಲಿ ಹಲವು ಬಾರಿ ಸೋಲುಂಡಿರುವುದು ಅವರಿಗೆ ಅಡ್ಡಿಯಾಗುವ ಸಾಧ್ಯತೆಯಿದೆ. ಹೀಗಾಗಿ ಪ್ರಮುಖ ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೆಸರು ಪ್ರಧಾನವಾಗಿ ಕೇಳಿಬರತೊಡಗಿದೆ.

ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇ ಶ್ವರ್ ಅವರ ಬೆಂಬಲವನ್ನು ಛಲವಾದಿ ಈಗಾಗಲೇ ಗಿಟ್ಟಿಸಿದ್ದಾರೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಡ್ಡಿಯಾಗದಿದ್ದರೆ ಈ ಕ್ಷೇತ್ರದಿಂದ ಛಲವಾದಿ ನಾರಾಯಣ ಸ್ವಾಮಿ ಈ ಬಾರಿ ಕಾಂಗ್ರೆಸ್ ಟಿಕೆಟ್‌ನಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚು ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!