ಚಾಮರಾಜಪೇಟೆಯಿಂದ ಜಮೀರ್ ಅಹಮದ್’ಗೆ ಕಾಂಗ್ರೆಸ್ ಟಿಕೆಟ್

Published : Mar 03, 2018, 12:51 PM ISTUpdated : Apr 11, 2018, 12:48 PM IST
ಚಾಮರಾಜಪೇಟೆಯಿಂದ ಜಮೀರ್ ಅಹಮದ್’ಗೆ ಕಾಂಗ್ರೆಸ್ ಟಿಕೆಟ್

ಸಾರಾಂಶ

ಕಾಂಗ್ರೆಸ್‌ನಿಂದ ಜಿ.ಎ. ಬಾವಾ ಸೇರಿದಂತೆ ಆಕಾಂಕ್ಷಿಗಳ ಪಟ್ಟಿಯೇ ಇದ್ದರೂ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿರುವ ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಟಿಕೆಟ್ ಭರವಸೆ ನೀಡಲಾಗಿದೆ.

ಚಾಮರಾಜಪೇಟೆ: ಕಾಂಗ್ರೆಸ್‌ನಿಂದ ಜಿ.ಎ. ಬಾವಾ ಸೇರಿದಂತೆ ಆಕಾಂಕ್ಷಿಗಳ ಪಟ್ಟಿಯೇ ಇದ್ದರೂ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳಲಿರುವ ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್‌ಗೆ ಟಿಕೆಟ್ ಭರವಸೆ ನೀಡಲಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಮುಸ್ಲಿಂ ಮುಖಂಡರಾಗಿ ಹೊರ ಹೊಮ್ಮಿರುವ ಜಮೀರ್ ಕ್ಷೇತ್ರದಲ್ಲಿ ಮುಸ್ಲಿಮರೇ ನಿರ್ಣಾಯಕರು. ಈ ಮತಗಳನ್ನು ವಿಭಜಿಸುವ ಉದ್ದೇಶದಿಂದ ಮುಸ್ಲಿಂ ಸಮುದಾಯಕ್ಕೆ ಸೇರಿದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಆದರೂ ಈವರೆಗೆ ಅಂತಿಮ ತೀರ್ಮಾನ ಹೊರಬಿದ್ದಿಲ್ಲ. ಬಿಜೆಪಿಯಿಂದ ಕಳೆದ ಬಾರಿ ಸ್ಪರ್ಧಿಸಿದ್ದ ಬಿ.ವಿ.ಗಣೇಶ್ ಅವರು ಮತ್ತೊಮ್ಮೆ ಟಿಕೆಟ್‌ಗಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಈ ಬಾರಿ ಚಿತ್ರೋದ್ಯಮಿ ಲಹರಿ ವೇಲು ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ. ಲಹರಿ ವೇಲು ಅವರು ಅಭ್ಯರ್ಥಿಯಾದಲ್ಲಿ ಜಮೀರ್‌ಗೆ ಪ್ರಬಲ ಪೈಪೋಟಿ ಒಡ್ಡಬಹುದು ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?