ಕಾಂಗ್ರೆಸ್ನಿಂದ ಜಿ.ಎ. ಬಾವಾ ಸೇರಿದಂತೆ ಆಕಾಂಕ್ಷಿಗಳ ಪಟ್ಟಿಯೇ ಇದ್ದರೂ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಳ್ಳಲಿರುವ ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಟಿಕೆಟ್ ಭರವಸೆ ನೀಡಲಾಗಿದೆ.
ಚಾಮರಾಜಪೇಟೆ: ಕಾಂಗ್ರೆಸ್ನಿಂದ ಜಿ.ಎ. ಬಾವಾ ಸೇರಿದಂತೆ ಆಕಾಂಕ್ಷಿಗಳ ಪಟ್ಟಿಯೇ ಇದ್ದರೂ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಳ್ಳಲಿರುವ ಹಾಲಿ ಶಾಸಕ ಜಮೀರ್ ಅಹ್ಮದ್ ಖಾನ್ಗೆ ಟಿಕೆಟ್ ಭರವಸೆ ನೀಡಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಮುಸ್ಲಿಂ ಮುಖಂಡರಾಗಿ ಹೊರ ಹೊಮ್ಮಿರುವ ಜಮೀರ್ ಕ್ಷೇತ್ರದಲ್ಲಿ ಮುಸ್ಲಿಮರೇ ನಿರ್ಣಾಯಕರು. ಈ ಮತಗಳನ್ನು ವಿಭಜಿಸುವ ಉದ್ದೇಶದಿಂದ ಮುಸ್ಲಿಂ ಸಮುದಾಯಕ್ಕೆ ಸೇರಿದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಆದರೂ ಈವರೆಗೆ ಅಂತಿಮ ತೀರ್ಮಾನ ಹೊರಬಿದ್ದಿಲ್ಲ. ಬಿಜೆಪಿಯಿಂದ ಕಳೆದ ಬಾರಿ ಸ್ಪರ್ಧಿಸಿದ್ದ ಬಿ.ವಿ.ಗಣೇಶ್ ಅವರು ಮತ್ತೊಮ್ಮೆ ಟಿಕೆಟ್ಗಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಈ ಬಾರಿ ಚಿತ್ರೋದ್ಯಮಿ ಲಹರಿ ವೇಲು ಪ್ರಬಲ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದಾರೆ. ಲಹರಿ ವೇಲು ಅವರು ಅಭ್ಯರ್ಥಿಯಾದಲ್ಲಿ ಜಮೀರ್ಗೆ ಪ್ರಬಲ ಪೈಪೋಟಿ ಒಡ್ಡಬಹುದು ಎನ್ನಲಾಗುತ್ತಿದೆ.