ಬಿಜೆಪಿಯಿಂದ ರಾಜ್ಯಸಭೆ ಚುನಾವಣೆಗೆ ಅಂತಿಮವಾಗದ ಅಭ್ಯರ್ಥಿ

Published : Mar 06, 2018, 11:11 AM ISTUpdated : Apr 11, 2018, 12:40 PM IST
ಬಿಜೆಪಿಯಿಂದ ರಾಜ್ಯಸಭೆ ಚುನಾವಣೆಗೆ ಅಂತಿಮವಾಗದ ಅಭ್ಯರ್ಥಿ

ಸಾರಾಂಶ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭಿಸಬಹುದಾದ ಒಂದು ಸ್ಥಾನಕ್ಕೆ ಇದುವರೆಗೆ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ.

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಲಭಿಸಬಹುದಾದ ಒಂದು ಸ್ಥಾನಕ್ಕೆ ಇದುವರೆಗೆ ಯಾರನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿಲ್ಲ. ಈ ಸಂಬಂಧ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ ಎಂಬ ನಿರ್ಣಯವನ್ನು ಕೈಗೊಂಡಿರುವ ಪಕ್ಷದ ರಾಜ್ಯ ಕೋರ್ ಕಮಿಟಿಯು ವರಿಷ್ಠರು ಅಭಿಪ್ರಾಯ ಕೇಳಿದರೆ ಹಲವು ಹೆಸರುಗಳನ್ನು ಪ್ರಸ್ತಾಪಿಸಲು ಮುಂದಾಗಿದೆ.

ಈ ನಡುವೆ ಭಾನುವಾರ ನಡೆದ ಕೋರ್ ಕಮಿಟಿ ಸಭೆಯ ಸಂದರ್ಭ ಈಗ ತೆರವುಗೊಳಿಸುತ್ತಿರುವ ಪಕ್ಷೇತರ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಮಾಜಿ ಸಂಸದರಾದ ವಿಜಯ್ ಸಂಕೇಶ್ವರ್, ತೇಜಸ್ವಿನಿ ಗೌಡ ಹೆಸರುಗಳು ಅನೌಪಚಾರಿಕವಾಗಿ ಚರ್ಚೆಗೆ ಬಂದಿವೆ. ಆದರೆ, ಸಮಯದ ಅಭಾವದಿಂದ ಈ ಬಗ್ಗೆ ಹೆಚ್ಚು ಚರ್ಚಿಸದೆ ವರಿಷ್ಠರ ನಿರ್ಣಯಕ್ಕೆ ಬಿಡಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!