ಟ್ರಬಲ್ ಶೂಟರ್ ಮುಂದಿನ ಟಾರ್ಗೆಟ್ ಯಾರು?

Published : Jul 13, 2019, 03:48 PM ISTUpdated : Jul 13, 2019, 04:17 PM IST
ಟ್ರಬಲ್ ಶೂಟರ್ ಮುಂದಿನ ಟಾರ್ಗೆಟ್ ಯಾರು?

ಸಾರಾಂಶ

ಕರ್ನಾಟಕ ರಾಜಕೀಯದಲ್ಲಿ ರಾಜೀನಾಮೆ ಪ್ರಹಸನ ಮುಂದುವರಿದಿಎ. ಇತ್ತ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ನಿರಂತರ ಟ್ರಬಲ್ ಶೂಟ್ ಯತ್ನದಲ್ಲಿದ್ದಾರೆ. ಅವರ ಮುಂದಿನ ನಡೆ ಏನು?

ಬೆಂಗಳೂರು [ಜು.13 :  ರಾಜ್ಯ ರಾಜಕೀಯದ ರಾಜೀನಾಮೆ ಪ್ರಹಸನ ನಡೆಯುತ್ತಿದ್ದು, ಇದೇ ವೇಳೆ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿರುವ ಡಿ.ಕೆ.ಶಿವಕುಮಾರ್  ತಮ್ಮ ಜವಾಬ್ದಾರಿ ನಿಬಾಯಿಸುತ್ತಿದ್ದಾರೆ. 

ಒಬ್ಬೊಬ್ಬರೆ ಅತೃಪ್ತರನ್ನು ಮನ ಒಲಿಸಿ ಪಕ್ಷದ ಮುಖಂಡರು ಬಳಿ ಕರೆತಂದು ಒಪ್ಪಿಸುತ್ತಿದ್ದಾರೆ. 

ಮುಂಬೈಗೆ ಅತೃಪ್ತರ ಭೇಟಿಗೆಂದು ತೆರಳಿ ಅವರನ್ನು ಭೇಟಿಯಾಗದೇ ವಾಪಸಾಗಿದ್ದ ಡಿಕೆಶಿ ಇದೀಗ ಬೆಂಗಳೂರಿನಲ್ಲಿರುವ ಅತೃಪ್ತರನ್ನು ಟಾರ್ಗೆಟ್ ಮಾಡಿದ್ದಾರೆ. 

ಕರ್ನಾಟಕ ರಾಜಕೀಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅತೃಪ್ತ ನಾಯಕ ಎಂದು ಗುರುತಿಸಿಕೊಂಡ ಎಂಟಿಬಿ ನಾಗರಾಜ್ ಭೇಟಿ ಮಾಡಿ ಚರ್ಚೆ ನಡೆಸಿದ ಡಿ.ಕೆ.ಶಿವಕುಮಾರ್ ಮುಂದಿನ ಟಾರ್ಗೆಟ್ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಎನ್ನಲಾಗಿದೆ. 

ಈಗಾಗಲೇ ಎಂಟಿಬಿ ನಾಗಾರಜ್ ಅವರನ್ನು ಕರೆತಂದು ಸಿದ್ದರಾಮಯ್ಯ ಬಳಿ ಒಪ್ಪಿಸಿ ಚರ್ಚೆ ನಡೆಸುವಲ್ಲಿ ಯಶಸ್ವಿಯಾದ ಅವರು, ಮುಂದೆ ಸುಧಾಕರ್ ಅವರನ್ನು ಭೇಟಿ ಮಾಡಿ ಮನ ಒಲಿಸಲಿದ್ದಾರೆ ಎನ್ನಲಾಗುತ್ತಿದೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್
ಬೆಂಗಳೂರಿಗಾಗಿ ಶ್ರಮಿಸಿದೆವು ಆದ್ರೂ ತಮ್ಮನನ್ನು ಸೋಲಿಸಿದ್ರಿ: ಅಪಾರ್ಟ್‌ಮೆಂಟ್‌ ನಿವಾಸಿಗಳ ವಿರುದ್ಧ ಕಿಡಿಯಾದ ಡಿಕೆಶಿ