ಈ ಇಬ್ಬರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಯಾರಿಗೆ..?

Published : Aug 04, 2018, 08:44 AM ISTUpdated : Aug 04, 2018, 09:39 AM IST
ಈ ಇಬ್ಬರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಯಾರಿಗೆ..?

ಸಾರಾಂಶ

ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟಕ್ಕೆ ಇಬ್ಬರ ವ್ಯಕ್ತಿಗಳ ಹೆಸರು ಹೇಳಿ ಬಂದಿದೆ. ಎಚ್ . ವಿಶ್ವನಾಥ್ ಹೆಸರು ಪಕ್ಕಾ ಆಗಿದ್ದು  ಒಂದು ವೇಳೆ ಅವರು ನಿರಾಕರಿಸಿದಲ್ಲಿ ಮಧು ಬಂಗಾರಪ್ಪ ಅವರ ನೇಮಕ ಸಾಧ್ಯತೆ ಇದೆ. 

ಹುಣಸೂರು/ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ, ಹಿರಿಯ ನಾಯಕ ಎಚ್.ವಿಶ್ವನಾಥ್ ನೇಮಕವಾಗುವ ಸಾಧ್ಯತೆ  ದಟ್ಟವಾಗಿದ್ದು, ಒಂದು ವೇಳೆ ಅವರಾಗಿಯೇ ನಿರಾಕರಿಸಿದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಆ ಸ್ಥಾನ ಒಲಿದು ಬರುವ ಸಾಧ್ಯತೆಯಿದೆ. 

ಭಾನುವಾರ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಪಕ್ಷದ ಶಾಸಕರ ಸಭೆ ಕರೆದಿದ್ದು, ಆ ಸಭೆಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರವೂ ಪ್ರಮುಖವಾಗಿ ಪ್ರಸ್ತಾಪವಾಗುವ ಸಂಭವವಿದೆ. ವಿಶ್ವನಾಥ್ ಅವರ ಹೆಸರನ್ನು ಅಧಿಕೃತವಾಗಿ ಪ್ರಸ್ತಾಪಿಸುವ ನಿರೀಕ್ಷೆಯೂ ಇದೆ ಎಂದು ತಿಳಿದು ಬಂದಿದೆ. ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಕಾಲದಿಂದಲೂ ಕಾಂಗ್ರೆಸ್ ಶಾಸಕರಾಗಿ, ಮಂತ್ರಿಯಾಗಿ, ಸಂಸದರಾಗಿ ವಿಶ್ವ ನಾಥ್ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. 

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ ಹುಣುಸೂರು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮೈಸೂರು ಭಾಗದ ಅನುಭವಿ ರಾಜಕಾರಣಿ ಹಾಗೂ ಕುರುಬ ಸಮುದಾಯಕ್ಕೆ ಸೇರಿದ ವಿಶ್ವನಾಥ್ ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗುತ್ತಾರೆಂಬ ನಿರೀಕ್ಷೆ ಯಿತ್ತಾದರೂ ಕೊನೇ  ಗಳಿಗೆಯಲ್ಲಿ ಅದು ಸುಳ್ಳಾಯಿತು. ಈಗ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ವಿಶ್ವನಾಥ್ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಹೊಣೆವಹಿಸಲು ನಿರ್ಧರಿಸಿದ್ದಾರೆ. 

ಒಪ್ಪಿಕೊಳ್ಳಿ ಅಂದಿದ್ದಾರೆ- ವಿಶ್ವನಾಥ್: ‘ರಾಜ್ಯಾಧ್ಯಕ್ಷರ ಹುದ್ದೆ ಎಂದು ಕೇಳಿಲ್ಲ, ಅವರು ಕೊಟ್ಟರೆ ಖಂಡಿತ ಪ್ರಾಮಾಣಿಕವಾಗಿ ಪಕ್ಷ ಸಂಘಟನೆ ಮಾಡುವೆ. ಈ ಸಂಬಂಧ ಒಮ್ಮೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ಜತೆಗೆ ಚರ್ಚಿಸಿ ಪಕ್ಷ ಸಂಘಟನೆಗೆ ನೀವು ಒಪ್ಪಬೇಕು ಎಂದಿದ್ದು ನಿಜ. ಆಗ ನಾನು ನನಗೆ ವಯಸ್ಸಾಗಿದೆ, ಬೇರೆ ಯಾರಿಗಾದರೀ ಆ ಜವಾಬ್ದಾರಿ ಕೊಡಿ ಎಂದು ಹೇಳಿ ನಿರಾಕರಿಸಿದ್ದೆ’ ಎಂದು ಖುದ್ದು ವಿಶ್ವನಾಥ್ ತಿಳಿಸಿದರು. 

‘ಆದರೂ ನಿಮ್ಮಂಥವರು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ಒಪ್ಪಿಕೊಳ್ಳಬೇಕೆಂದು ಅವರು ಹೇಳಿದ್ದಾರೆ. ಕುಮಾರಸ್ವಾಮಿ ಕೂಡ ನಿಮಗೆ ಮುಂದೆ ಒಳ್ಳೆಯ ಅವಕಾಶ ಅರಸಿಬರಲಿದೆ ಎಂದಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಪ್ರೀತಿಯಿಂದ ಸ್ವೀಕರಿಸುತ್ತೇನೆ. ಜತೆಗೆ ರಾಜ್ಯಾದ್ಯಂತ ಪಕ್ಷ  ಸಂಘಟನೆಗೆ ಒತ್ತು ನೀಡುತ್ತೇನೆ. ತಳಹಂತದಿಂದ ಪಕ್ಷ ಕಟ್ಟುವ ಮೂಲಕ ಮುಂಬರುವ ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆ ಹಾಗೂ ಇತರೆ ಚುನಾವಣೆಗಳಲ್ಲಿ ಜೆಡಿಎಸ್ ಗೆಲ್ಲಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಹೇಳಿದರು. 

ಆದರೂ ಪಕ್ಷದಲ್ಲಿ ವಿಶ್ವನಾಥ್ ನೇಮಕದ ಬಗ್ಗೆ ಇನ್ನೂ ಅನುಮಾನದ ಸುದ್ದಿಗಳು ತೇಲಿಬರುತ್ತಿವೆ. ಹಾಗೊಂದು ವೇಳೆ ವಿಶ್ವನಾಥ್ ಅವರು ರಾಜ್ಯಾಧ್ಯಕ್ಷರಾಗದಿದ್ದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಆ ಜವಾಬ್ದಾರಿ ನೀಡಬಹುದು ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧರ್ಮಸ್ಥಳ ಪ್ರಕರಣ: ಶಿವಮೊಗ್ಗ ಜೈಲಿನಿಂದ ಇಂದು 'ಬುರುಡೆ ಚಿನ್ನಯ್ಯ' ಬಿಡುಗಡೆ, ಶ್ಯೂರಿಟಿ ಕೊಟ್ಟಿದ್ದು ಯಾರು?
India Latest News Live: ಬಿಹಾರ ಸೋಲಿನ ಬಳಿಕ ಪ್ರಶಾಂತ್ ಕಿಶೋರ್ - ಪ್ರಿಯಾಂಕಾ ಗಾಂಧಿ ರಹಸ್ಯ ಭೇಟಿ?