ಯಾರಿಗೆ ಒಲಿಯಲಿದೆ ಕೆಪಿಸಿಸಿ ಅಧ್ಯಕ್ಷ ಪಟ್ಟ

Published : May 28, 2018, 08:07 AM IST
ಯಾರಿಗೆ ಒಲಿಯಲಿದೆ ಕೆಪಿಸಿಸಿ ಅಧ್ಯಕ್ಷ ಪಟ್ಟ

ಸಾರಾಂಶ

 ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ಅವರು ತ್ಯಜಿಸಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವ ಸಮುದಾಯಕ್ಕೆ ದೊರೆಯಲಿದೆ ಎಂಬ ಬಗ್ಗೆ ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ಮೂಲಗಳ ಪ್ರಕಾರ ದಲಿತ ಸಮುದಾಯಕ್ಕೆ ಸೇರಿದ ಪರಮೇಶ್ವರ್  ಅವರಿಗೆ ಈಗ ಉಪ ಮುಖ್ಯಮಂತ್ರಿ ಹುದ್ದೆ ದೊರಕಿರುವುದರಿಂದ ಈ ಹುದ್ದೆ ಮೇಲ್ವರ್ಗಗಳೆನಿಸಿದ ಒಕ್ಕಲಿಗ ಅಥವಾ ಲಿಂಗಾಯತ ಸಮುದಾಯಕ್ಕೆ ದೊರೆಯಲಿದೆ.   

ಬೆಂಗಳೂರು :  ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್ ಅವರು ತ್ಯಜಿಸಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾವ ಸಮುದಾಯಕ್ಕೆ ದೊರೆಯಲಿದೆ ಎಂಬ ಬಗ್ಗೆ ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ಮೂಲಗಳ ಪ್ರಕಾರ ದಲಿತ ಸಮುದಾಯಕ್ಕೆ ಸೇರಿದ ಪರಮೇಶ್ವರ್  ಅವರಿಗೆ ಈಗ ಉಪ ಮುಖ್ಯಮಂತ್ರಿ ಹುದ್ದೆ ದೊರಕಿರುವುದರಿಂದ ಈ ಹುದ್ದೆ ಮೇಲ್ವರ್ಗಗಳೆನಿಸಿದ ಒಕ್ಕಲಿಗ ಅಥವಾ ಲಿಂಗಾಯತ ಸಮು ದಾಯಕ್ಕೆ ದೊರೆಯಲಿದೆ. 

ಜತೆಗೆ, ಹಿಂದುಳಿದ ವರ್ಗಕ್ಕೆ ಈ ಹುದ್ದೆ ನೀಡಬೇಕು ಎಂಬ ವಾದವೂ ಇದೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ಸಮುದಾಯದಿಂದ ಡಿ.ಕೆ. ಶಿವಕುಮಾರ್, ಲಿಂಗಾಯತ ಸಮುದಾ ಯದಿಂದ ಎಂ.ಬಿ. ಪಾಟೀಲ್ ಮತ್ತು ಹಿಂದುಳಿದ ವರ್ಗದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೆಸರು ಪರಿಗಣನೆಯಲ್ಲಿದೆ ಎನ್ನಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ್ ಅವರೊಂದಿಗೆ ಈ ಬಗ್ಗೆ ಈಗಾಗಲೇ ಒಂದು ಸುತ್ತಿನ ಚರ್ಚೆ ನಡೆಸಿದೆ ಎನ್ನಲಾಗಿದೆ.

ಆದರೆ, ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಗಾದಿಯ ಜತೆಗೆ ಸಚಿವ ಸ್ಥಾನವನ್ನೂ ಕೇಳುತ್ತಿದ್ದಾರೆ.  ಹೀಗಾಗಿ, ಒಬ್ಬರಿಗೆ ಎರಡು ಹುದ್ದೆ ನೀಡಬೇಕೇ ಎಂಬ ಪ್ರಶ್ನೆ ಹೈಕಮಾಂಡನ್ನು ಕಾಡುತ್ತಿದೆ. ಇನ್ನು ಲಿಂಗಾಯತ ಸಮುದಾಯದಿಂದ ಎಂ.ಬಿ.ಪಾಟೀಲ್ ಹೆಸರನ್ನು ಗಂಭೀರವಾಗಿ ಈ ಹುದ್ದೆಗೆ ಪರಿಗಣಿಸಲಾಗುತ್ತಿದೆ. 

ಏಕೆಂದರೆ, ಡಿಸಿಎಂನಂತಹ ಪ್ರಮುಖ ಹುದ್ದೆ ಉತ್ತರ ಕರ್ನಾಟಕಕಕ್ಕೆ ದೊರಕಿಲ್ಲ ಎಂಬ ದೂರಿದೆ. ಜತೆಗೆ, ಎಂ.ಬಿ.ಪಾಟೀಲ್ ಅವರಿಗೆ ಪಕ್ಷ ನಡೆಸಲು ಮುಖ್ಯವೆನಿಸಿದ ಸಂಪನ್ಮೂಲ ಸಂಗ್ರಹ ಸಾಮರ್ಥ್ಯವೂ ಇದೆ. ಅವರಿಗೆ ಹುದ್ದೆ ನೀಡಿದರೆ, ಉತ್ತರ ಕರ್ನಾಟಕಕ್ಕೆ ಪ್ರಾಮುಖ್ಯತೆ ನೀಡಿದಂತೆ ಆಗುತ್ತದೆ. ಜತೆಗೆ, ಸಂಪನ್ಮೂಲ ವ್ಯಕ್ತಿಯೊಬ್ಬರು ಈ ಹುದ್ದೆಗೆ ಬಂದಂತೆ ಆಗುತ್ತದೆ ಎಂಬ ಚಿಂತನೆ ಹೈಕಮಾಂಡ್ ಮಟ್ಟದಲ್ಲಿದೆ ಎನ್ನ ಲಾಗಿದೆ.

ಇನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಕೊಡುಗೆ ಉತ್ತಮವಿರಬೇಕು ಎಂಬ ಬಯಕೆಯನ್ನು ಹೈಕಮಾಂಡ್ ಹೊಂದಿರುವುದರಿಂದ ಸಿದ್ದರಾಮಯ್ಯ ಅವರಿಗೆ ನೇತೃತ್ವ ನೀಡಿದರೆ ಅಹಿಂದ ವರ್ಗ ಜತೆಗೆ ನಿಲ್ಲಬಹುದು ಎಂಬ ಚಿಂತನೆಯೂ ಇದೆ ಎನ್ನುತ್ತವೆ ಮೂಲಗಳು. ಆದರೆ, ಸದ್ಯ ವಿದೇಶ ಯಾತ್ರೆಯಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಭಾರತಕ್ಕೆ ಹಿಂತಿರುಗುವವರೆಗೂ ಈ ವಿಚಾರ ಇತ್ಯರ್ಥವಾಗುವ ಲಕ್ಷಣವಿಲ್ಲ. ರಾಹುಲ್ ಭಾರತಕ್ಕೆ ಹಿಂತಿರುಗಿದ ಕೂಡಲೇ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಪ್ರಕ್ರಿಯೆಗೆ ಚಾಲನೆ ದೊರೆಯುತ್ತದೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!