
ಚೆನ್ನೈ (ಫೆ.16): ಶಶಿಕಲಾ ಜೈಲು ಸೇರುತ್ತಿದ್ದಂತೆ, ಅತ್ತ ತಮಿಳುನಾಡು ರಾಜಕೀಯ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಹೊಸ ಸರ್ಕಾರ ರಚನೆಗೆ ಅವಕಾಶ ನೀಡಲು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಗವರ್ನರ್ ಸೂಚಿಸಲಿದ್ದಾರೆ.
ಶಶಿಕಲಾ ಘೋಷಿಸಿ ಹೋಗಿರುವ ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕ ಪಳನಿಸ್ವಾಮಿಗೆ ಮೊದಲು ಅವಕಾಶ ನೀಡುವ ಸಾಧ್ಯತೆ ಇದೆ.
ಶಶಿಕಲಾ ಜೈಲು ಪಾಲಾಗುತ್ತಿದ್ದಂತೆ ಗವರ್ನರ್ ವಿದ್ಯಾಸಾಗರ್ ಪಳನಿಸ್ವಾಮಿಯನ್ನು ಸಂಪರ್ಕಿಸಿ ಬೆಂಬಲಿಗರ ಸಹಿ ಸಂಗ್ರಹದ ಪಟ್ಟಿ ನೀಡುವಂತೆ ಸೂಚಿಸಿದ್ದಾರೆ.
ಅದರಂತೆ ನಿನ್ನೆ ಪಳನಿಸ್ವಾಮಿ ಬೆಂಬಲಿತ 124 ಶಾಸಕರ ಸಹಿ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ. ಇದರ ಬೆನ್ನಲ್ಲೇ ಪನ್ನೀರ್ ಸೆಲ್ವಂ ಕೂಡ ಗವರ್ನರ್ ಭೇಟಿಯಾಗಿ ತಮಗೆ ಸರ್ಕಾರ ರಚನೆಗೆ ಅವಕಾಶ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.