
ಕಲಬುರಗಿ: ಕರ್ನಾಟಕ ಮಕ್ಕಳ ಮಕ್ಷದ ಶಾಸಕ, ನೈಸ್ ಕಂಪನಿ ಮಾಲೀಕ ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆಗೆ ಪಕ್ಷದ ಹಿರಿಯ ನಾಯಕ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸುದ್ದಿ ಗಾರರ ಜತೆ ಮಾತನಾಡಿದ ಅವರು, ಖೇಣಿ ಕಾಂಗ್ರೆಸ್ ಸೇರ್ಪಡೆ ವಿಚಾರವೇ ತಮಗೆ ಗೊತ್ತಿಲ್ಲ. ಖೇಣಿ ಅವರನ್ನು ಯಾರು, ಯಾವ ಕಾರಣಕ್ಕಾಗಿ ಕಾಂಗ್ರೆಸ್ಸಿಗೆ ಕರೆತಂದರೋ ಗೊತ್ತಿಲ್ಲ. ಅವರನ್ನು ಪಕ್ಷಕ್ಕೆ ಕರೆತರುವ ಮುನ್ನ ಯಾರೂ ನನ್ನೊಂದಿಗೆ ಕುಳಿತು ಚರ್ಚಿಸಿಲ್ಲ. ಖೇಣಿ ಆಗಮನದಿಂದ ಪಕ್ಷಕ್ಕೆ ಯಾವ ಲಾಭಗಳಿವೆ ಎಂಬುದು ನನಗಂತೂ ಗೊತ್ತಿಲ್ಲ. ಈ ಕುರಿತು ಖೇಣಿ ಅವರನ್ನು ಯಾರು ಕರೆತಂದಿದ್ದಾರೋ ಅವರೇ ಉತ್ತರಿಸಬೇಕು ಎಂದರು.
ಖೇಣಿ ಸೇರ್ಪಡೆಗೆ ಈಗಾಗಲೇ ಮಾಜಿ ಮುಖ್ಯಮಂತ್ರಿ ದಿ. ಧರಂ ಸಿಂಗ್ ಪುತ್ರ ಅಜಯ್ ಸಿಂಗ್ ಹಾಗೂ ಅಳಿಯ ಕೂಡ ಆಗಿರುವ ಬೀದರ್ ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಚಂದ್ರಹಾಸ ಸಿಂಗ್ ಅವರು ವಿರೋಧ ವ್ಯಕ್ತಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.