
ನವದೆಹಲಿ (ಡಿ.12):ಗುಜರಾತ್ನಲ್ಲಿ ಕಾಂಗ್ರೆಸ್ ನಿಶ್ಚಿತವಾಗಿ ಸರ್ಕಾರ ರಚಿಸುತ್ತದೆ ಎಂದು ಹೇಳುತ್ತಿರುವ ಕಾಂಗ್ರೆಸ್ ಪಕ್ಷ ರಾಹುಲ್ಗೆ ಪಟ್ಟ ಕಟ್ಟಲು ಯಾಕೆ ಇಷ್ಟೊಂದು ತರಾತುರಿಯಲ್ಲಿದೆ ಎಂಬ ಬಗ್ಗೆ ಬಹಳ ಚರ್ಚೆಗಳು ದೆಹಲಿಯಲ್ಲಿ ಕಾಂಗ್ರೆಸ್ ವಲಯದಲ್ಲಿಯೇ ನಡೆಯುತ್ತಿವೆ.
ಇನ್ಸೈಡರ್ಗಳು ಹೇಳುವ ಪ್ರಕಾರ ಗುಜರಾತ್ನಲ್ಲಿ ಕಾಂಗ್ರೆಸ್ ಒಳ್ಳೆಯ ಪ್ರದರ್ಶನ ತೋರಲಿದೆ ಎಂದು ಹೈಕಮಾಂಡ್ಗೆ ಅನ್ನಿಸಿದೆ ಯಾದರೂ ಸರ್ಕಾರ ರಚಿಸುತ್ತದೆ ಎಂಬ ಭರವಸೆಯಿಲ್ಲ. ಹೀಗಾಗಿ ಒಂದು ವೇಳೆ ಗುಜರಾತ್ನಲ್ಲಿ ಸೋತರೆ ಆಗ ರಾಹುಲ್ ಗಾಂಧಿ ಅಧ್ಯಕ್ಷರಾಗುವುದು ಚರ್ಚೆಯ ವಿಷಯವಾದೀತು ಎಂದು ಫಲಿ ತಾಂಶ ಬರುವ ೨ ದಿನ ಮೊದಲೇ ರಾಹುಲ್ಗಾಂಧಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿ ದ್ದಾರೆ. ಏನಾಗುತ್ತದೋ ಗೊತ್ತಿಲ್ಲ, ಆದರೆ ಮೋದಿ ಗೆದ್ದರೇನು ಸೋತರೇನು, ರಾಹುಲ್ ಗೆದ್ದರೇನು ಸೋತ ರೇನು ಎಂಬುದನ್ನು ಬಿಟ್ಟರೆ ಬೇರೆ ಯಾವ ಚರ್ಚೆಯೂ ದೆಹಲಿಯ ರಾಜಕಾರಣಿಗಳು ಮತ್ತು ಪತ್ರಕರ್ತರಲ್ಲಿ ನಡೆಯುತ್ತಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.