
ಬೆಂಗಳೂರು[ಜು.17] ಕಾವೇರಿ ಸಭೆಗೆ ಸಂಸದರಿಗೆ ಆಹ್ವಾನ ನೀಡಿರುವುದು ಸ್ವಾಗತಾರ್ಹ. ಆದರೆ ದುಬಾರಿ ಸ್ಮಾರ್ಟ್ ಫೋನ್ ನೀಡಿರುವುದು ಯಾಕೆ? ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ತಮಗೆ ಕಳುಹಿಸಿದ್ದ ಐ-ಪೋನ್ ವಾಪಸ್ ಮಾಡಿದ್ದಾರೆ.
ವೆಚ್ಚ ಕಡಿತದ ಬಗ್ಗೆ ಈ ಹಿಂದೆ ನೀವೇ ಮಾತನಾಡಿದ್ದೀರಿ, ಆದರೆ ಸಂಸದರಿಗೆ ಈ ಬಗೆಯ ದುಬಾರಿ ಗಿಫ್ಟ್ ಯಾಕೆ ಕಳುಹಿಸಿಕೊಟ್ಟಿದ್ದೀರಿ? ಎಂದು ಪ್ರಶ್ನೆ ಮಾಡಿದ್ದು ತಮ್ಮ ಟ್ವಿಟರ್ ಖಾತೆಯಲ್ಲಿ ದುಬಾರಿ ಗಿಫ್ಟ್ ನ ಫೋಟೋ ಪೋಸ್ಟ್ ಮಾಡಿದ್ದಾರೆ.
ನಗರವನ್ನು ಸ್ವಚ್ಛವಾಗಿಡುವ ಪೌರ ಕಾರ್ಮಿಕರಿಗೆ ಸಂಬಳ ಸಿಗುತ್ತಿಲ್ಲ. ಅವರ ಸಂಕಷ್ಟ ಕೇಳುವವರು ಯಾರು ಇಲ್ಲದಾಗಿದೆ. ಒಂದು ಕಡೆ ಸರಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ನೀವೇ ಹೇಳುತ್ತೀರಾ? ಇಂಥ ಸಂದರ್ಭದಲ್ಲಿ ಸಾರ್ವಜನಿಕರ ಹಣವನ್ನು ಇಂಥ ದುಬಾರಿ ಗಿಫ್ಟ್ ನೀಡಲು ಯಾಕೆ ಬಳಸಿದ್ದೀರಾ? ಎಂದು ಪ್ರಶ್ನೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.