
ಬೆಂಗಳೂರು (ಜ.12): ನಮ್ಮ ಹೆಮ್ಮೆಯ ಇಸ್ರೋ ಇಂದು ಆಂಧ್ರ ಪ್ರದೇಶದ ಶ್ರೀಹರಿಕೋಟ ಉಪಗ್ರಹ ಉಡಾವಣಾ ಕೇಂದ್ರದಿಂದ 31 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿದೆ. ಇದೊಂದು ಮೈಲಿಗಲ್ಲಾಗಿದ್ದು, ಬಾಹ್ಯಾಕಾಶದಲ್ಲಿ ಭಾರತ ಸಾಧನೆ ಕಂಡು ಪಾಕಿಸ್ತಾನಕ್ಕೆ ನಡುಕ ಉಂಟಾಗಿದೆ.
ಉಪಗ್ರಹ ಉಡಾವಣೆಗೂ ಮುನ್ನ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಭಾರತಕ್ಕೆ ಎಚ್ಚರಿಕೆ ನೀಡಿದ್ದು ರಕ್ಷಣಾ ದೃಷ್ಟಿಯಿಂದ ಈ ಉಪಗ್ರಹಗಳನ್ನು ಭಾರತ ಪಯೋಗಿಸಬಾರದು. ಇದರಿಂದ ದೂರ ಇರಬೇಕು ಎಂದು ಹೇಳಿದೆ. ಈ ಮೂಲಕ ತನ್ನ ಭಯವನ್ನು ವ್ಯಕ್ತಪಡಿಸಿದೆ.
ಭೂ ವೀಕ್ಷಣಾ ಉಪಗ್ರಹಗಳು ಸೇರಿದಂತೆ ಬಾಹ್ಯಾಕಾಶದ ಎಲ್ಲಾ ತಂತ್ರಜ್ಞಾನಗಳನ್ನು ನಾಗರೀಕ ಮತ್ತು ಸೇನಾ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತದೆ. ಇದು ಪ್ರಾದೇಶಿಕ ಸ್ಥಿರತೆ ಮೇಲೆ ಪರಿಣಾಮ ಬೀರುತ್ತದೆ ಎಂದು ಪಾಕಿಸ್ತಾನ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.