‘ಸಂಸತ್‌'ನಲ್ಲಿ ಮೋದಿ ಯಾಕೆ ಮಾತನಾಡುತ್ತಿಲ್ಲ’: ಹಾಲಿ ಪ್ರಧಾನಿ ವಿರುದ್ಧ ಮಾಜಿ ಪ್ರಧಾನಿ ಗರಂ

Published : Nov 22, 2016, 03:31 AM ISTUpdated : Apr 11, 2018, 01:06 PM IST
‘ಸಂಸತ್‌'ನಲ್ಲಿ ಮೋದಿ ಯಾಕೆ ಮಾತನಾಡುತ್ತಿಲ್ಲ’: ಹಾಲಿ ಪ್ರಧಾನಿ ವಿರುದ್ಧ  ಮಾಜಿ ಪ್ರಧಾನಿ ಗರಂ

ಸಾರಾಂಶ

ನೋಟ್ ಬ್ಯಾನ್'ನಿಂದ ಜನರಿಗೆ ಆಗುತ್ತಿರುವ ಸಂಕಷ್ಟ ತೊಂದರೆ ಮುಂದಿಟ್ಟುಕೊಂಡು ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಇದೇ ವಿಚಾರಕ್ಕೆ ಸಂಸತ್ ಚಳಿಗಾಲದ ಅಧಿವೇಶನವೂ ಬಲಿಯಾಗುತ್ತಿದೆ ಎಂದು ಮಾಜಿಪ್ರಧಾನಿ ದೇವೇಗೌಡ ಮೋದಿ ವಿರುದ್ಧ ತಿರುಗಿಬಿದ್ದಿದ್ದಾರೆ. ದೇಶದ ತುಂಬೆಲ್ಲ ನೋಟು ರದ್ದತಿ ಬಗ್ಗೆ ಭಾಷಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತ್ರ ಮಾತನಾಡುವುದಿಲ್ಲ, ಚರ್ಚೆಯಲ್ಲಿ ಭಾಗವಹಿಸುತ್ತಿಲ್ಲ ಏಕೆ ಅಂತಾ ಪ್ರಶ್ನಿಸಿದರು. ನಾನು ಹಳ್ಳಿಗಳಲ್ಲಿ ರೈತರು ಅನುಭವಿಸುತ್ತಿರುವ ತೊಂದರೆಯನ್ನು ಹೇಳಲು ಬಂದಿದ್ದೇನೆ, ಆದರೆ ಸದನವೇ ನಡೆಯುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ನವದೆಹಲಿ(ನ.22): ನೋಟ್ ಬ್ಯಾನ್'ನಿಂದ ಜನರಿಗೆ ಆಗುತ್ತಿರುವ ಸಂಕಷ್ಟ ತೊಂದರೆ ಮುಂದಿಟ್ಟುಕೊಂಡು ವಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಇದೇ ವಿಚಾರಕ್ಕೆ ಸಂಸತ್ ಚಳಿಗಾಲದ ಅಧಿವೇಶನವೂ ಬಲಿಯಾಗುತ್ತಿದೆ ಎಂದು ಮಾಜಿಪ್ರಧಾನಿ ದೇವೇಗೌಡ ಮೋದಿ ವಿರುದ್ಧ ತಿರುಗಿಬಿದ್ದಿದ್ದಾರೆ.

ದೇಶದ ತುಂಬೆಲ್ಲ ನೋಟು ರದ್ದತಿ ಬಗ್ಗೆ ಭಾಷಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತ್ರ ಮಾತನಾಡುವುದಿಲ್ಲ, ಚರ್ಚೆಯಲ್ಲಿ ಭಾಗವಹಿಸುತ್ತಿಲ್ಲ ಏಕೆ ಅಂತಾ ಪ್ರಶ್ನಿಸಿದರು. ನಾನು ಹಳ್ಳಿಗಳಲ್ಲಿ ರೈತರು ಅನುಭವಿಸುತ್ತಿರುವ ತೊಂದರೆಯನ್ನು ಹೇಳಲು ಬಂದಿದ್ದೇನೆ, ಆದರೆ ಸದನವೇ ನಡೆಯುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜನ ಖರ್ಗೆ ಕೂಡ ಮೋದಿ ವಿರುದ್ದ ಕಿಡಿಕಾರಿದ್ದಾರೆ. ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮೇಲಿನ ಚರ್ಚೆಗೆ ಅವಕಾಶ ಮಾಡಿಕೊಡಬೇಕು. ಇಲ್ಲವಾದಲ್ಲಿ ಮತದಾನವಿಲ್ಲದೆ ಚರ್ಚೆಗೆ ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೊಂಡಿ ಬೀಚ್‌ನಲ್ಲಿ ಯಹೂದಿಯರ ಹಬ್ಬದಲ್ಲಿ ರಕ್ತಪಾತಗೈದ ಹಂತಕ ಭಾರತೀಯ: ಹೈದರಾಬಾದ್ ಓಲ್ಡ್ ಸಿಟಿಯಿಂದ ವಲಸೆ ಹೋದವ
'ಮಾದೇಶ್ವರ ದಯಬಾರದೆ..' ಯೂಟ್ಯೂಬ್‌ನಲ್ಲಿ ಟ್ರೆಂಡ್‌ ಆದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡು!