ನಡಹಳ್ಳಿ ಜೆಡಿಎಸ್ ತೊರೆದು, ಬಿಜೆಪಿ ಸೇರಿದ್ದು ಏಕೆ ಗೊತ್ತಾ?

Published : Mar 24, 2018, 12:42 PM ISTUpdated : Apr 11, 2018, 12:43 PM IST
ನಡಹಳ್ಳಿ ಜೆಡಿಎಸ್ ತೊರೆದು, ಬಿಜೆಪಿ ಸೇರಿದ್ದು ಏಕೆ ಗೊತ್ತಾ?

ಸಾರಾಂಶ

ಜೆಡಿಎಸ್‌ ನಾಯಕರು ಕಾಂಗ್ರೆಸ್‌ ಜತೆ ಒಳ ಒಪ್ಪಂದ ಮಾಡಿಕೊಂಡು ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದರು ಎಂದು ದೇವರ ಹಿಪ್ಪರಗಿ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಆಪಾದಿಸಿದ್ದಾರೆ.

ಮುದ್ದೇಬಿಹಾಳ: ಜೆಡಿಎಸ್‌ ನಾಯಕರು ಕಾಂಗ್ರೆಸ್‌ ಜತೆ ಒಳ ಒಪ್ಪಂದ ಮಾಡಿಕೊಂಡು ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದರು ಎಂದು ದೇವರ ಹಿಪ್ಪರಗಿ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಆಪಾದಿಸಿದ್ದಾರೆ.

ಜೆಡಿಎಸ್‌ ಸಖ್ಯ ತೊರೆದು ಬಿಜೆಪಿ ಸೇರ್ಪಡೆಗೊಂಡ ಮೇಲೆ ಮೊದಲ ಬಾರಿ ಶುಕ್ರವಾರ ರಾತ್ರಿ ಪಟ್ಟಣ ಪ್ರವೇಶಿಸಿದರು. ಈ ವೇಳೆ ಬಿಜೆಪಿ ಮೂಲ ಕಾರ್ಯಕರ್ತರು ನೀಡಿದ ಅದ್ಧೂರಿ ಸ್ವಾಗತ ಸ್ವೀಕರಿಸಿ ಬಸವೇಶ್ವರ ವೃತ್ತದಲ್ಲಿ ಜನರನ್ನುದ್ದೇಶಿಸಿ ಅವರು ಮಾತನಾಡಿದ ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್‌ ಜೊತೆ ಜೆಡಿಎಸ್‌ ನಾಯಕರು ಒಳ ಒಪ್ಪಂದ ಮಾಡಿಕೊಂಡಿದ್ದರು ಎಂದು ದೂರಿದರು.

ನಾನು ಗೊಂದಲದಲ್ಲಿದ್ದಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ಕರೆದು ನೀನು ಉತ್ತರ ಕರ್ನಾಟಕದ ಜನಪ್ರಿಯ ವ್ಯಕ್ತಿ, ಜೆಡಿಎಸ್‌ನಲ್ಲಿರೋದರಿಂದ ಸೂಕ್ತ ಸ್ಥಾನಮಾನ ಸಿಗೋದು ಅನುಮಾನ. ಬಿಜೆಪಿಗೆ ಬಂದು ಮುದ್ದೇಬಿಹಾಳ, ದೇವರ ಹಿಪ್ಪರಗಿ ವಿಧಾನಸಭಾ ಮತಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸೋ ಜವಾಬ್ದಾರಿ ತಗೋಬೇಕು ಎಂದು ಆಹ್ವಾನಿಸಿದರು. ಶರತ್ತು ಇಲ್ಲದೆ ಸಾಮಾನ್ಯ ಕಾರ್ಯಕರ್ತನಾಗಿ ಬಿಜೆಪಿ ಸೇರಿದ್ದೇನೆ ಎಂದು ಸ್ಪಷ್ಟಪಡಿಸಿದರು.

2008ರಲ್ಲಿ ಬಿಜೆಪಿಯಿಂದಲೇ ರಾಜಕೀಯ ಜೀವನ ಪ್ರಾರಂಭಿಸಲು ಪ್ರಯತ್ನಿಸಿದ್ದೆ. ಕಾಂಗ್ರೆಸ್‌ನಲ್ಲಿ ಶಾಸಕನಾಗಿ ನೋವನುಭವಿಸಿ ಹೊರಬಂದ ಮೇಲೆ ಮತ್ತೇ ಬಿಜೆಪಿ ಸೇರಲು ಯತ್ನಿಸಿದ್ದರೂ ಸಾಧ್ಯವಾಗಿರಲಿಲ್ಲ. 2 ವರ್ಷದಿಂದ ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿದ್ದರೂ ಮನಸ್ಸು ಮಾತ್ರ ಬಿಜೆಪಿ ಕಡೆ ಇತ್ತು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!
ಬೆಳಗಾವಿ ಅಧಿವೇಶನ ಕೊನೆ ದಿನವೂ ಗದ್ದಲ: ವಿಪಕ್ಷ, ಸಂಘಟನೆಗಳಿಂದ ಪ್ರತಿಭಟನೆ!