
ನವದೆಹಲಿ (ಅ.17): ತಾಜ್ ಮಹಲ್ ನಮ್ಮ ಸಂಸ್ಕೃತಿ ಅಲ್ಲ ಎನ್ನುವುದಾದರೆ ಅದರ ದಾಸ್ಯದ ಸಂಕೇತವಾಗಿರುವ ರಾಷ್ಟ್ರಪತಿ ಭವನ, ಕುತುಬ್ ಮಿನಾರ್, ಕೆಂಪುಕೋಟೆಯನ್ನು ಕೆಡವಿ ಬಿಡಿ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಕರೆ ನೀಡಿದ್ದಾರೆ.
ಹಿಂದೂಗಳನ್ನು ಸರ್ವನಾಶ ಮಾಡಲು ಪ್ರಯತ್ನಿಸಿದ್ದ' ಮೊಘಲ್ ದೊರೆ ಷಹಜಹಾನ್ನನ್ನು ಭಾರತದ ಇತಿಹಾಸ ಮತ್ತು ಸಂಸ್ಕೃತಿಯ ಭಾಗವಾಗಿ ಪರಿಗಣಿಸುವುದಾದರೆ 'ನಾವು ಇತಿಹಾಸವನ್ನೇ ಬದಲಿಸುತ್ತೇವೆ' ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಸಂಗೀತ್ ಸೋಮ್ ನಿನ್ನೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಜಂ ಖಾನ್, ತಾಜ್ ಮಹಲ್ ಒಂದೇ ಯಾಕೆ? ರಾಷ್ಟ್ರಪತಿ ಭವನ, ಕುತುಬ್ ಮಿನಾರ್, ಕೆಂಪುಕೋಟೆಯನ್ನು ಯಾಕೆ ಕೆಡವಬಾರದು? ಇವೆಲ್ಲವೂ ದಾಸ್ಯದ ಸಂಕೇತವಲ್ಲವೇ? ಆರ್’ಎಸ್’ಎಸ್’ನವರು ಇದನ್ನು ದೇಶದ್ರೋಹದ ಸಂಕೇತವೆಂದು ಕರೆಯಲಿ ನೋಡೋಣ. ಒಂದು ವೇಳೆ ಅದನ್ನು ಕೆಡವುದಾದರೆ ಮಾತ್ರ ತಾಜ್ ಮಹಲನ್ನು ಕೆಡವಬೇಕು ಎಂದು ಅಜಂ ಖಾನ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.