
ನವದೆಹಲಿ: ಜಮ್ಮು- ಕಾಶ್ಮೀರದ ಸುಂಜ್ವಾನ್ ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಸಾವನ್ನಪ್ಪಿದ ಏಳು ಜನರ ಪೈಕಿ ಐವರು ಕಾಶ್ಮೀರಿ ಮುಸ್ಲಿಮರಾಗಿದ್ದಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.
ಈ ಮೂಲಕ ಯೋಧರ ಸಾವಿಗೂ ಜಾತಿ ಬಣ್ಣ ಮೆತ್ತಿದ್ದಾರೆ. ಆದರೆ, ದೇಶದ ಕೆಲವು ವ್ಯಕ್ತಿಗಳು ಮುಸ್ಲಿಮರ ರಾಷ್ಟ್ರೀಯತೆಯನ್ನು ಅನುಮಾನಿಸುತ್ತಾರೆ. ಉಗ್ರರು ಕಾಶ್ಮೀರಿ ಮುಸ್ಲಿಮರನ್ನು ಹತ್ಯೆ ಮಾಡಿದ್ದಕ್ಕೆ ಯಾರೂ ಏನ್ನನ್ನೂ ಹೇಳುತ್ತಿಲ್ಲ.
ಕೆಲವರು ಮುಸ್ಲಿಮರನ್ನು ಪಾಕಿಸ್ತಾನಿಗಳು ಎಂದು ಕರೆಯುತ್ತಾರೆ. ಉಗ್ರರು ನಮ್ಮನ್ನೂ ಹತ್ಯೆ ಮಾಡಿದ್ದಾರೆ. ಮುಸ್ಲಿಮರ ನೈತಿಕತೆಯ ಬಗ್ಗೆ ಸಂದೇಹ ಪಡುವ ವ್ಯಕ್ತಿಗಳು ಇದರಿಂದ ಪಾಠ ಕಲಿಯುವ ಅಗತ್ಯವಿದೆ ಎಂದು ಒವೈಸಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.