
ನವದೆಹಲಿ (ಡಿ.09): ನೋಟು ಅಮಾನ್ಯ ಬಳಿಕ ವಾರಕ್ಕೆ ನಿಗದಿಗೊಳಿಸಲಾಗಿದ್ದ 24 ಸಾವಿರ ವಿತ್ ಡ್ರಾ ನೀತಿಯನ್ನು ಯಾಕೆ ಅನುಸರಿಸುತ್ತಿಲ್ಲ ಎಂದು ಸುಪ್ರೀಂ ಕೇಂದ್ರಕ್ಕೆ ತರಾಟೆಗೆ ತೆಗದುಕೊಂಡಿದೆ.
ಇದಕ್ಕೆ ಉತ್ತರಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಹಣವನ್ನು ವಿತ್ ಡ್ರಾ ಮಾಡುವಲ್ಲಿ ತೊಂದರೆಯಾಗುತ್ತಿದೆ ಎಂದು ಎಷ್ಟು ಜನ ದೂರು ನೀಡಿದ್ದಾರೆ ಎನ್ನುವ ಮಾಹಿತಿ ಕೊಡಿ ಎಂದು ಸುಪ್ರೀಂ ಗೆ ಕೇಳಿದ್ದಾರೆ.
ನೋಟು ಅಮಾನ್ಯದ ಸಾಧಕ-ಬಾಧಕಗಳ ಬಗ್ಗೆ ನ್ಯಾಯಾಲಯ ಪ್ರಶ್ನಿಸಿದಾಗ, ಕಪ್ಪುಹಣ ಮತ್ತು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಲುವಾಗಿ ಇದನ್ನು ಜಾರಿಗೊಳಿಸಲಾಗಿದೆ. ಈ ಪ್ರಕ್ರಿಯೆ ನಿಧಾನವಾಗಿ ನಡೆಯುತ್ತಿದೆ ಎಂದು ರೋಹಟ್ಗಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಪಿ. ಚಿದಂಬರಂ ಮಾತನಾಡಿ, ಅಗತ್ಯಕ್ಕೆ ತಕ್ಕಷ್ಟು ನೋಟು ಮುದ್ರಿಸಲು ಸರ್ಕಾರಕ್ಕೆ ಕನಿಷ್ಟ ಐದು ತಿಂಗಳಾದರೂ ಬೇಕು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.