ಲಖನೌನಲ್ಲಿ ಪತ್ರಕರ್ತನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿರುವ ಮತ್ತೊಂದು ಪ್ರಕರಣ ವರದಿಯಾಗಿದೆ.
ಲಖನೌ: ಲಖನೌನಲ್ಲಿ ಪತ್ರಕರ್ತನ ಮೇಲೆ ದುಷ್ಕರ್ಮಿಗಳಿಂದ ದಾಳಿ ನಡೆದಿರುವ ಮತ್ತೊಂದು ಪ್ರಕರಣ ವರದಿಯಾಗಿದ್ದು, ಸಮಯ ಪ್ರಜ್ಞೆಯಿಂದ ಪತ್ನಿ ಮರು ದಾಳಿ ನಡೆಸಿ, ಪತಿಯನ್ನು ರಕ್ಷಿಸಿಕೊಂಡಿದ್ದಾರೆ.
ಕಕೋರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಈ ವೇಳೆ ಪತ್ರಕರ್ತನ ಪತ್ನಿ ಗುಂಡು ಹಾರಿಸಿದ್ದು, ಸರಿಯಾದ ಸಮಯಕ್ಕೆ ಬಂದು, ದುಷ್ಕರ್ಮಿಗಳ ದಾಳಿಯಿಂದ ಪತಿಯನ್ನು ಬಚಾವ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Man attacked by unknown assailants is saved by gun toting wife in Lucknow district's Kakori. Police begin investigation (4.2.18) pic.twitter.com/7bfp9600WN
— ANI UP (@ANINewsUP)ಗುಂಡಿನ ಸದ್ದಿಗೆ ಬೆದರಿದ ದುಷ್ಕರ್ಮಿಗಳು ಸ್ಥಳಗಳಿಂದ ಕಾಲ್ಕಿತ್ತಿದ್ದಾರೆ. ದಾಳಿಯ ಈ ದೃಶ್ಯ ಮನೆಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.