ಪತಿಯ ಮೇಲೆ ಅನುಮಾನದಿಂದ ಪ್ರಾಣ ಬಿಟ್ಟ ಪತ್ನಿ: ಮಗುವನ್ನು ಕೊಂದು ತಾನು ಆತ್ಮಹತ್ಯೆಗೆ ಶರಣು

Published : Jul 08, 2017, 08:10 AM ISTUpdated : Apr 11, 2018, 01:05 PM IST
ಪತಿಯ ಮೇಲೆ ಅನುಮಾನದಿಂದ ಪ್ರಾಣ ಬಿಟ್ಟ ಪತ್ನಿ: ಮಗುವನ್ನು ಕೊಂದು ತಾನು ಆತ್ಮಹತ್ಯೆಗೆ ಶರಣು

ಸಾರಾಂಶ

ಪತಿಗೆ ಬೇರೊಬ್ಬ ಮಹಿಳೆಯ ಜೊತೆ ಅಕ್ರಮ ಸಂಬಂಧವಿದೆ ಎನ್ನುವ ಅನುಮಾನದಿಂದ ಬೇಸತ್ತು ಗೃಹಿಣಿಯೊಬ್ಬರು  6 ವರ್ಷದ ಮಗುವನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಕೆಂಪೇಗೌಡನಗರದಲ್ಲಿ ನಡೆದಿದೆ.

ಬೆಂಗಳೂರು(ಜು.08): ಪತಿಗೆ ಬೇರೊಬ್ಬ ಮಹಿಳೆಯ ಜೊತೆ ಅಕ್ರಮ ಸಂಬಂಧವಿದೆ ಎನ್ನುವ ಅನುಮಾನದಿಂದ ಬೇಸತ್ತು ಗೃಹಿಣಿಯೊಬ್ಬರು  6 ವರ್ಷದ ಮಗುವನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನ ಕೆಂಪೇಗೌಡನಗರದಲ್ಲಿ ನಡೆದಿದೆ.

ಸಮೀರಪುರ ನಿವಾಸಿ ಮಂಗಳ ಮತ್ತು  6 ವರ್ಷದ ಮಗು ಸನ್ನಿಧಿ ಮೃತ ದುರ್ದೈವಿಗಳು. ಪತಿ ಶಂಕರ್'​ಗೆ ಬೇರೊಬ್ಬ ಮಹಿಳೆ ಜೊತೆ ಅಕ್ರಮ ಸಂಬಂಧವಿತ್ತು ಎಂಬ ಕಾರಣಕ್ಕೆ ಇಬ್ಬರ ನಡುವೆ ಪತಿ ಪತ್ನಿ ನಡುವೆ ಆಗ್ಗಿಂದ್ದಾಗ್ಗೆ ಜಗಳ ನಡೆಯುತ್ತಿತ್ತು. ಇದೇ ವಿಚಾರವಾಗಿ ಮಂಗಳ ಬಹಳ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ನಿನ್ನೆ  ಮಧ್ಯಾಹ್ನ 6:30ರ ವೇಳೆ ತಮ್ಮ ಮನೆಯ ಕೊಠಡಿಯೊಂದರಲ್ಲಿ ತನ್ನ ಮಗಳನ್ನು ಮೊದಲು ನೇಣಿಗೇರಿಸಿ ಬಳಿಕ ಗೃಹಿಣಿ ಮಂಗಳ ಪಕ್ಕದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಶಂಕರ್ ಕೆಲಸ ಮುಗಿಸಿ ಮನೆಗೆ ಬಂದಾಗ ವಿಷ್ಯ ಬೆಳಕಿಗೆ ಬಂದಿದ್ದು ಕೂಡಲೇ ಅವರು ಕೆ.ಜಿನಗರ ಪೊಲೀಸ್ರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ, ಘಟನೆ ಸಂಬಂಧ ಕೆ.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಳಂದ ಮತಚೋರಿ ಆರೋಪ ರಾಜಕೀಯ ಪ್ರೇರಿತ: ಎಸ್‌ಐಟಿ ಕ್ರಮದ ವಿರುದ್ಧ ಸುಭಾಷ್ ಗುತ್ತೇದಾರ್ ಕಿಡಿ
ಪಶ್ಚಿಮ ಬಂಗಾಳದಲ್ಲಿ 1 ಕೋಟಿ ನಕಲಿ ಮತದಾರರಿಗೆ ಕೊಕ್ ಸಾಧ್ಯತೆ