
ನವದೆಹಲಿ (ಮಾ.20): ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂ)ನಲ್ಲಾಗುತ್ತಿರುವ ವಂಚನೆ ವಿರುದ್ಧ ಮುಂದಿನ ಎರಡು ಮೂರು ದಿನಗಳಲ್ಲಿ ನ್ಯಾಯಾಲಯದ ಮೊರೆಹೋಗುವುದಾಗಿ ಬಿಎಸ್ಪಿ ವರಿಷ್ಠೆ ಮಾಯಾವತಿ ಪುನರುಚ್ಚರಿಸಿದ್ದಾರೆ.
ಇವಿಎಂಗಳಲಲ್ಲಿ ವಂಚನೆ ನಡೆದಿರುವುದು ಉತ್ತರ ಪ್ರದೇಶದ ಜನತೆಗೆ ಗೊತ್ತಾಗಿದೆ. ಈ ವಿಚಾರದಲ್ಲಿ ಸುಮ್ಮನಿರುವುದಿಲ್ಲ, ಮುಂದಿನ 2-3 ದಿನಘಲಲ್ಲಿ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ಮಾಯಾವತಿ ಹೇಳಿದ್ದಾರೆ.
ಬಿಎಸ್ಪಿ ನಾಯಕನ ಹತ್ಯೆ:
ಭಾನುವಾರ ರಾತ್ರಿ ಬಿಎಸ್ಪಿ ನಾಯಕ ಮೊಹಮ್ಮದ್ ಶಮಿ ಅವರನ್ನು ಅಲಹಾಬಾದ್’ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಯಾವತಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದಾಗಲಿ ಅಥವಾ ಅಭಿವೃದ್ಧಿಯನ್ನು ಸಾಧಿಸುವುದಾಗಲಿ ಹೊಸ ಸರ್ಕಾರದಿಂದ ಸಾಧ್ಯವಿಲ್ಲ; ಅದು ಆರೆಸ್ಸೆಸ್ ಏಜೆಂಡಾವನ್ನು ಜಾರಿಗೊಳಸಬಹುದಷ್ಟೇ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.