
ಉಡುಪಿ: ಸಿಎಂ ಸಿದ್ದರಾಮಯ್ಯ ಇಂದು ಉಡುಪಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ದುಬೈ ಉದ್ಯಮಿ ಬಿ.ಆರ್.ಶೆಟ್ಟಿ ಸಹಭಾಗಿತ್ವದಲ್ಲಿ ಹೆರಿಗೆ ಆಸ್ಪತ್ರೆಯೊಂದು ನಿರ್ಮಾಣವಾಗಿದ್ದು, ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮ ಕೃಷ್ಣಮಠದಿಂದ ಅನತಿ ದೂರದಲ್ಲೇ ನಡೆಯಲಿದೆ. ಹಾಗಾಗಿ ಈ ಬಾರಿಯಾದ್ರೂ ಸಿಎಂ ಕೃಷ್ಣಮಠಕ್ಕೆ ಭೇಟಿ ನೀಡ್ತಾರಾ? ಎಂಬುವುದು ಈಗ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಸಿಎಂ ಕಳೆದ 4 ಬಾರಿ ಉಡುಪಿಗೆ ಬಂದಾಗಲೂ ಕೃಷ್ಣಮಠಕ್ಕೆ ಭೇಟಿ ನೀಡಿರಲಿಲ್ಲ. ಹಾಗಾಗಿ ಈ ಬಾರಿ ಮಠದಿಂದ ಯಾವುದೇ ಅಧಿಕೃತ ಆಹ್ವಾನ ನೀಡಿಲ್ಲ. ಕೃಷ್ಣಮಠದ ಜೊತೆ ದಶಕಗಳಿಂದ ಅಂತರ ಕಾಯ್ದುಕೊಂಡು ಬಂದಿರುವ ಸಿಎಂ. ತಮ್ಮ ನಿಲುವಿಗೆ ಬದ್ದರಾಗಿ ಮಠಕ್ಕೆ ಭೇಟಿ ನೀಡದಿರುವ ಸಾಧ್ಯತೆಯೇ ಹೆಚ್ಚಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.