
ಚಿಕ್ಕಬಳ್ಳಾಪುರ: ಹೈಕಮಾಂಡ್ ಹೇಳಿದ ಕಡೆ ಸ್ಪರ್ಧಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೀಡಿರುವ ಪಂಥಾಹ್ವಾನಕ್ಕೆ ತಣ್ಣನೆಯ ಪ್ರತಿಕ್ರಿಯೆ ನೀಡಿದ್ದಾರೆ.
ಅಲ್ಲದೇ ಬಿಎಸ್ವೈ ಅವರಿಗೆ ಸತ್ಯ ಹೇಳಿಯೇ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು,ತಾವು 40 ವರ್ಷದಿಂದ ರಾಜಕಾರಣದಲ್ಲಿದ್ದು, ಈಗಾಗಲೇ ಉತ್ತರ ಕರ್ನಾಟಕದ ಕೊಪ್ಪಳದಲ್ಲಿ ಸ್ಪರ್ಧಿಸಿದ್ದೇನೆ.
ಆದರೂ ಹೈಕಮಾಂಡ್ ಎಲ್ಲಿ ಹೇಳುವುದೋ ಅಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದರು. ಬಿಎಸ್ವೈ ಅವರ ವಿರುದ್ಧ ಹರಿ ಹಾಯ್ದ ಸಿಎಂ, ಅವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಡೋಂಗಿತನ ಪ್ರದರ್ಶಿ ಸುತ್ತಿದ್ದಾರೆ. ರೈತರ ಸಾಲಮನ್ನಾ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವಲ್ಲಿ ವಿಫಲವಾಗಿರುವ ಯಡಿಯೂರಪ್ಪ ಅವರು, ಭಿಕ್ಷುಕರಿಗೆ ನೀಡಿದಂತೆ ರೈತರಿಗೆ ಅಲ್ಪ ಸಾಲ ಮನ್ನಾ ಮಾಡಿದ್ದಾರೆ ಎಂದು ಲೇವಡಿ ಮಾಡಿರುವುದು ವಿಪರ್ಯಾಸ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.