
ಮಂಡ್ಯ (ಸೆ.16): ಕಾವೇರಿ ನೀರು ಹೋರಾಟದ ಮುಂದಿನ ರೂಪುರೇಷೆ ರಚಿಸಲು ಮಂಡ್ಯದಲ್ಲಿ ಜಿಲ್ಲಾ ಪ್ರತಿನಿಧಿಗಳ ಸಭೆ ಅಂತ್ಯಗೊಂಡಿದೆ.
ಈ ವೇಳೆ ಮಾತನಾಡಿದ ಮಾಜಿ ಸಂಸದ ಮಾದೇಗೌಡ, ಸಮಸ್ಯೆ ಬಗೆಹರಿಯುವವರೆಗೂ ಇದೇ ರೀತಿ ಹೋರಾಟ ಮುಂದುವರಿಯುವುದು ಎಂದು ಹೇಳಿದ್ದಾರೆ.
20ನೇ ತಾರೀಕು ಟ್ರಿಬ್ಯೂನಲ್ ಆದೇಶ ನೋಡಿಕೊಂಡು ಮುಂದಿನ ಹೋರಾಟ ತೀರ್ಮಾನ ಮಾಡುತ್ತೇವೆ ಎಂದು ಮಾದೇಗೌಡ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಅಂಬರೀಷ್ ಗೈರು ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಮಾದೇಗೌಡರು, ಅಂಬರೀಷ್ ನಮ್ಮ ದೇಶದಲ್ಲೇ ಇಲ್ಲವಲ್ಲಾ, ದೇಶವನ್ನೇ ಬಿಟ್ಟು ಹೋಗಿದ್ದಾರೆ. ಅಂಬರೀಷ್ ಎಲ್ಲಿದ್ದಾರೆ ಅಂತಾ ನೀವೇ ಮಾಧ್ಯಮದವರೇ ಹೇಳಬೇಕು ಅಂತಾ ಕಿಡಿಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.