
ನಾಗಪುರ (ಡಿ.12): ದಲಿತರು ಹಾಗೂ ಹಿಂದುಳಿದ ವರ್ಗಗಳ ಮೇಲಿನ ದೌರ್ಜನ್ಯವನ್ನು ಆರ್’ಎಸ್ಎಸ್ ಹಾಗೂ ಬಿಜೆಪಿ ನಿಲ್ಲಿಸದೇ ಹೋದರೆ ಕೋಟ್ಯಂತರ ಬೆಂಬಲಿಗರ ಜತೆ ಹಿಂದು ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುತ್ತೇನೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಎಚ್ಚರಿಕೆ ನೀಡಿದ್ದಾರೆ.
ಇಲ್ಲಿ ಬಿಎಸ್ಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಹಿಂದು ಆಗಿ ಹುಟ್ಟಿದ್ದೇನೆ, ಹಿಂದು ಆಗಿಯೇ ಸಾಯುವುದಿಲ್ಲ ಎಂದು 1935ರಲ್ಲಿ ಅಂಬೇಡ್ಕರ್ ಘೋಷಣೆ ಮಾಡಿದ್ದರು.
ಬದಲಾಗಲು ಹಿಂದು ಧಾರ್ಮಿಕ ನಾಯಕರಿಗೆ 21 ವರ್ಷ ಸಮಯಾವಕಾಶ ನೀಡಿದ್ದರು. ಅವರ ಧೋರಣೆಯಲ್ಲಿ ಯಾವುದೇ ಬದಲಾವಣೆ ಕಾಣದಿದ್ದಾಗ 1956ರಲ್ಲಿ ನಾಗಪುರದಲ್ಲಿ ಅಂಬೇಡ್ಕರ್ ಮತಾಂತರ ಗೊಂಡಿದ್ದರು. ಅದೇ ರೀತಿ ನಾನು ಇಂದು ಬಿಜೆಪಿ, ಆರ್’ಎಸ್ಎಸ್’ಗೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಬಿಎಸ್’ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.